Sunday, September 13, 2026

BDA Apartments

ಸಿಎಂ ಬದಲಾವಣೆ ವಿಚಾರ ಕುರಿತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಪ...
Home Front Page ಸಿಎಂ ಬದಲಾವಣೆ  ವಿಚಾರ ಕುರಿತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದು ಹೀಗೆ.

ಸಿಎಂ ಬದಲಾವಣೆ  ವಿಚಾರ ಕುರಿತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದು ಹೀಗೆ.

ಬೆಂಗಳೂರು,ಜನವರಿ 4,2022(www.justkannada.in):  ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ವಿಚಾರ ಚರ್ಚೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಈಗಾಗಲೇ ಈ ಬಗ್ಗೆ ಬಿಜೆಪಿ ಹಲವು ನಾಯಕರು ಸ್ಪಷ್ಟನೆ ನೀಡಿದ್ದಾರೆ. ಈ ನಡುವೆ ಈ ಕುರಿತು  ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.

ಸಿಎಂ ಬದಲಾವಣೆ  ವಿಚಾರ ಕಪೋಕಲ್ಪಿತ. ಸಿಎಂ ಬದಲಾವಣೆ ಮಾಡುವ ಚಿಂತನೆ ಇಲ್ಲ. ಸಿಎಂ ಬದಲಾವಣೆ ವಿಚಾರ ಯಾರೂ ಮಾಡಿಲ್ಲ ಎಂದು ಬಿವೈ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಬಿವೈ ವಿಜಯೇಂದ್ರ, ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ಆದರೆ ಹಿಂದೂಗಳ ಅಭಿವೃದ್ಧಿ ಮಾಡಿಲ್ಲ ಎಂದು ಕಿಡಿಕಾರಿದರು.

Key words: State- BJP- vice-president- BY Vijayendra -commented – CM’s change.