ಕಾವೇರಿಗಾಗಿ ಕರ್ನಾಟಕ ಬಂದ್: ನಿಯಮ ಉಲ್ಲಂಘಿಸಿದರೇ  ಕಾನೂನು ಕ್ರಮ-ಗೃಹ ಸಚಿವ ಜಿ. ಪರಮೇಶ್ವರ್​​

ಬೆಂಗಳೂರು,ಸೆಪ್ಟಂಬರ್,29,2023(www.justkannada.in):  ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಇಂದು ಇಡೀ ಕರ್ನಾಟಕ ಬಂದ್ ಮಾಡಲಾಗಿದ್ದು ಈ ನಡುವೆ ನಿಯಮ ಉಲ್ಲಂಘಿಸಿದರೇ  ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್​​ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್, ನಾವು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಬಂದ್​ ಮಾಡದಂತೆ ಸಂಘಟನೆಗಳಿಗೆ ಮನವಿ ಮಾಡಿದ್ದೇವೆ. ಕಾನೂನಿನ ಪ್ರಕಾರ ಬಂದ್​ ಮಾಡಬಾರದು. ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದೇನೆ ಎಂದರು.

ನಿಯಮ ಉಲ್ಲಂಘಿಸಿದರೇ  ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಹೀಗಾಗಿ ಸಹಕರಿಸುತ್ತಾರೆ ಎಂಬ ವಿಶ್ವಾಸವಿದೆ. ಸುಖ ಸುಮ್ಮನೆ ಬಂಧಿಸುವುದಿಲ್ಲ. ಕಾನೂನು ವಿರುದ್ಧ ನಡೆದುಕೊಂಡರೆ ಬೇರೆ ವಿಧಿಯಿಲ್ಲ ಎಂದು ಡಾ.ಜಿ ಪರಮೇಶ್ವರ್​​  ತಿಳಿಸಿದ್ದಾರೆ.

Key words: Karnataka bandh – Cauvery dispute- Home Minister -G. Parameshwar