ಕಾವೇರಿ ಹೋರಾಟ: ನಾಳೆ ಸಿಎಂ ಮನೆಗೆ ಮುತ್ತಿಗೆ- ರೈತ ಮುಖಂಡ ಕುರುಬೂರು ಶಾಂತಕುಮಾರ್.

ಬೆಂಗಳೂರು,ಸೆಪ್ಟಂಬರ್,28,2023(www.justkannada.in):  ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.  ಇತ್ತ ರಾಜ ಕಬ್ಬುಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲೂ ಹೋರಾಟ ನಡೆಯುತ್ತಿದ್ದು ನಾಳೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಕುರುಬೂರು ಶಾಂತಕುಮಾರ್, ಕಾವೇರಿ ನೀರಿಗಾಗಿ ಆಗ್ರಹಿಸಿ  ನಾಳೆ ರಾಷ್ಟ್ರೀಯ ರಾಜ್ಯ ಹೆದ್ದಾರಿ ಬಂದ್ ಚಳುವಳಿ ಮಾಡುತ್ತೇವೆ. ನೀರು ಬಿಡಬೇಡಿ ಎಂದು ಎಚ್ಚರಿಕೆ ಕೊಟ್ಟಿದ್ದವು.  ಆದರೂ ಸಹ ಸರ್ಕಾರ ತಮಿಳುನಾಡಿಗೆ  3 ಸಾವಿರ ಕ್ಯೂಸೆಕ್ ನೀರು  ಹರಿಸುತ್ತಿದೆ. ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ.  ನಾಳೆ ಸಿಎಂ ಮನೆಗೆ ಮುತ್ತಿಗೆ ಹಾಕಲಾಗುತ್ತದೆ.  ರಾಜ್ಯಾದ್ಯಂತ ಹೆದ್ದಾರಿ ಬಂದ್ ಮಾಡುತ್ತೇವೆ ಎಂದು ತಿಳಿಸಿದರು.

Key words: Cauvery –fight- CM’s -house –tomorrow-  Farmer leader -Kuruburu Shanthakumar.