ಕೊವೀಡ್ ಭೀತಿ: ಬೆಳಗಾವಿಯಲ್ಲಿ ಅಧಿವೇಶನ ಸರ್ಕಾರದ ವಿವೇಚನೆಗೆ ಬಿಟ್ಟಿದ್ದು- ಸ್ಪೀಕರ್ ಕಾಗೇರಿ.

ಬೆಂಗಳೂರು,ನವೆಂಬರ್,29,2021(www.justkannada.in):  ಕೊರೋನಾ 3ನೇ ಅಲೆ ಹಾಗೂ ಕೊವೀಡ್ ಹೊಸ ತಳಿ ಒಮಿಕ್ರಾನ್ ಭೀತಿ ಹಿನ್ನೆಲೆ ರಾಜ್ಯದಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈ ಮಧ್ಯೆ ಈ ಬಾರಿ ಚಳಿಗಾಲದ ಅಧಿವೇಶನ ಡಿಸೆಂಬರ್ 13 ರಿಂದ ಬೆಳಗಾವಿಯಲ್ಲಿ ನಡೆಯಲಿದೆ.

ಈ ಕುರಿತು ಮಾತನಾಡಿರುವ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ರಾಜ್ಯದಲ್ಲಿ ಕೊರೋನಾ 3ನೇ ಅಲೆ ಬಗ್ಗೆ ಚರ್ಚೆಯಾಗುತ್ತಿದೆ ಹೀಗಾಗಿ ಬೆಳಗಾವಿ ಅಧಿವೇಶನದ ಬಗ್ಗೆ ಏನು ಹೇಳಲು ಆಗದು.  ಆ ವೇಳೆ ಕೊರೋನಾ ಸ್ಥಿತಿಗತಿ ಹೇಗಿರುತ್ತೆ ಎಂದು ಹೇಳಲು ಆಗಲ್ಲ. ಅದ್ಧರಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸುವುದು ಬಿಡುವುದು ಸರ್ಕಾರದ ವಿವೇಚನೆಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.

Key words:  covid- session -Belgaum –government-Speaker –vishwaswar hegde Kageri.