ಬೆಂಗಳೂರು, ನವೆಂಬರ್, 19,2025 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆಯಾಗಿರುವ ಘಟನೆ ನಡೆದಿದೆ.
ಜಯದೇವ ಡೇರಿ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು ದುಷ್ಕರ್ಮಿಗಳು ಬರೋಬ್ಬರಿ 7.11 ಕೋಟಿ ರೂ ದೋಚಿಕೊಂಡು ಪರಾರಿಯಾಗಿದ್ದಾರೆ. ಇನ್ನೋವಾ ಕಾರಿನಲ್ಲಿ ಬಂದಿದ್ದ 7-8 ಜನರ ಗ್ಯಾಂಗ್ ಈ ಕೃತ್ಯವೆಸಗಿದ್ದಾರೆ.
ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂ ಕಡೆ ಹೊರಟಿದ್ದ ಹಣ ಇದ್ದ ವಾಹನವನ್ನು ಜಯದೇವ ಡೇರಿ ಸರ್ಕಲ್ನ ಬಳಿ ತಡೆದು ಹಣ ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂಗೆ ಹಣ ಹಾಕಲೆಂದು GJ 01 HT 9173 ಸಂಖ್ಯೆ ವಾಹನ ಹಣ ತುಂಬಿಕೊಂಡು ತೆರಳುತ್ತಿತ್ತು.
ಈ ವೇಳೆ ಜಯದೇವ ಡೇರಿ ಸರ್ಕಲ್ನಲ್ಲಿ ಇನ್ನೋವಾದಲ್ಲಿ ಬಂದ ದುಷ್ಕರ್ಮಿಗಳು ಎಟಿಎಂ ವಾಹನ ತಡೆದು ಗನ್ ಮ್ಯಾನ್ ಸೇರಿದಂತೆ ಉಳಿದವರನ್ನೆಲ್ಲ ಅಲ್ಲೇ ಇಳಿಸಿ ವಾಹನ ಸಮೇತ ಚಾಲಕನನ್ನು ಡೇರಿ ಸರ್ಕಲ್ಗೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ಡೇರಿ ಸರ್ಕಲ್ ಫ್ಲೈಓವರ್ ಮೇಲೆ ನಿಲ್ಲಿಸಿ ವಾಹನದಲ್ಲಿದ್ದ ಹಣವನ್ನು ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಸುದ್ದಗುಂಟೆಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Key words: 7.11 crore ,rupees, robbery ,broad, daylight







