77ನೇ ಸ್ವಾತಂತ್ರ್ಯೋತ್ಸವ: ಭಾಷಣ ವೇಳೆ ಸುಸ್ತಾಗಿ ಕುಸಿದ ಸಚಿವ ಹೆಚ್.ಸಿ ಮಹದೇವಪ್ಪ.

ಮೈಸೂರು,ಆಗಸ್ಟ್,15,2023(www.justkannada.in): ಇಂದು ದೇಶಾದ್ಯಂತ 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮವಾಗಿದ್ದು ಮೈಸೂರಿನಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಸುಸ್ತಾಗಿ ಕುಸಿದ ಘಟನೆ ನಡೆದಿದೆ.

ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸ್ವಾತಂತ್ರ್ಯ ಸಮಾರಂಭ ಅದ್ದೂರಿಯಾಗಿ ನಡೆಯುತ್ತಿತ್ತು. ಈ ವೇಳೆ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಾಷಣ ಮಾಡುತ್ತಿದ್ದರು. ಈ ವೇಳೆ ಬಿಸಿಲಿನ ಬಿಸಿಲಿಗೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಸುಸ್ತಾದರು.  ಸುದೀರ್ಘ ಭಾಷಣ ಓದಿ ಸುಸ್ತಾಗಿ ಕುಳಿತರು.

ನೀರು ಕುಡಿದು ಸ್ವಲ್ಪ ಹೊತ್ತು ಸುಧಾರಿಸಿಕೊಂಡ ನಂತರ ಸಚಿವ ಹೆಚ್.ಸಿ ಮಹದೇವಪ್ಪ ಅವರು ಮತ್ತೆ ಕಾರ್ಯಕ್ರಮದಲ್ಲಿ‌ ಭಾಗಿಯಾದರು.

Key words: 77th Independence Day-mysore- Minister- HC Mahadevappa-tired- speech