Friday, August 21, 2026

BDA Apartments

Home Front Page ಹನೂರು ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ- ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್

ಹನೂರು ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ- ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್

ಚಾಮರಾಜನಗರ,ಫೆಬ್ರವರಿ,21,2023(www.justkannada.in): ಹನೂರು ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ನುಡಿದರು.

ಹನೂರಿನಲ್ಲಿ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದ ಆರ್.ಧೃವನಾರಾಯಣ್, ಮಲೆ ಮಹದೇಶ್ವರ ಬೆಟ್ಟ ಪ್ರಾಧಿಕಾರ ರಚನೆ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಇದರಿಂದಾಗಿ ಮಹದೇಶ್ವರ ಬೆಟ್ಟದಲ್ಲಿ ಸಾಕಷ್ಟು ಅಭಿವೃದ್ದಿಯಾಗಿದೆ. ಸಿದ್ಧರಾಮಯ್ಯ ಸಿಎಂ ಆಗಿದ್ದಾಗ ಜಿಲ್ಲೆಗೆ ಸಾಕಷ್ಟು ಅನುದಾನ ಕೊಟ್ಟಿದ್ದರು. ಆದರೇ ಬಿಜೆಪಿ ಸರ್ಕಾರ ಜಿಲ್ಲೆಗೆ ಅನುದಾನ ಕೊಟ್ಟಿಲ್ಲ.

ಸರ್ವೇ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ಕಾಂಗ್ರೆಸ್ ಈ ಬಾರಿ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಧೃವನಾರಾಯಣ್ ವಿಶ್ವಾಸ ವ್ಯಕ್ತಪಡಿಸಿದರು.

Key words: Hanur Constituency- Congress -stronghold- KPCC -Working President -R. Dhruvanarayan