Friday, August 14, 2026

BDA Apartments

Home Front Page ಕಾಂಗ್ರೆಸ್ ಮೇಲೆ ಜನರಿಗೆ ವಿಶ್ವಾಸವಿಲ್ಲ: ಕರ್ನಾಟಕ ಸಮಗ್ರ ಅಭಿವೃದ್ದಿಗೆ ಬಿಜೆಪಿ ಬದ್ಧ- ಸಿಎಂ ಬೊಮ್ಮಾಯಿ.

ಕಾಂಗ್ರೆಸ್ ಮೇಲೆ ಜನರಿಗೆ ವಿಶ್ವಾಸವಿಲ್ಲ: ಕರ್ನಾಟಕ ಸಮಗ್ರ ಅಭಿವೃದ್ದಿಗೆ ಬಿಜೆಪಿ ಬದ್ಧ- ಸಿಎಂ ಬೊಮ್ಮಾಯಿ.

ಹುಬ್ಬಳ್ಳಿಏಪ್ರಿಲ್,27,2023(www.justkannada.in): ಕರ್ನಾಟಕದ ಸಮಗ್ರ ಅಭಿವೃದ್ದಿಗೆ ಬಿಜೆಪಿ ಬದ‍್ಧವಾಗಿದೆ. ಡಬಲ್ ಇಂಜಿನ್ ಸರ್ಕಾರದಿಂದ ಹಲವು ಅಭಿವೃದ್ದಿ ಯೋಜನೆಗಳು ಜಾರಿಯಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,  ಡಬಲ್ ಇಂಜಿನ್ ಸರ್ಕಾರದಿಂದ ರಸ್ತೆ ನಿರ್ಮಾಣ ಕುಡಿಯುವ ನೀರು ಸೇರಿ ಹಲವು ಯೋಜನೆ ಜಾರಿಯಾಗಿದೆ. ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ವಿಶ್ವಾಸವಿಲ್ಲ. ಹೀಗಾಗಿಯೇ ಕಾಂಗ್ರೆಸ್ ನವರು ಗ್ಯಾರಂಟಿ ಕಾರ್ಡ್ ಹಂಚುತ್ತಿದ್ದಾರೆ. ಚುನಾವಣೆಗಾಗಿ ಗ್ಯಾರಂಟಿ ಕಾರ್ಡ್ ಹಂಚಿಕೆ ಮಾಡುತ್ತಿದ್ದಾರೆ.  ಈ ಹಿಂದೆಯೂ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಗ್ಯಾರಂಟಿ ಘೋಷಿಸಿತ್ತು. ಆದರೆ ಕಾಂಗ್ರೆಸ್ ಕೊಟ್ಟ ಭರವಸೆಗಳನ್ನ ಈಡೇರಿಸಿಲ್ಲ ಎಂದು ಲೇವಡಿ ಮಾಡಿದರು.

Key words: CM-Basavaraj bommai- hubli – development- bjp