Sunday, August 23, 2026

BDA Apartments

Home Front Page ನಾಡು ಕಂಡ ಮುತ್ಸದಿ ರಾಜಕಾರಣಿ ಡಿ.ದೇವರಾಜ ಅರಸು, ಅವರ ಕೆಲಸ ನಮಗೆ ಸ್ಪೂರ್ತಿ- ಸಿಎಂ ಸಿದ್ಧರಾಮಯ್ಯ.

ನಾಡು ಕಂಡ ಮುತ್ಸದಿ ರಾಜಕಾರಣಿ ಡಿ.ದೇವರಾಜ ಅರಸು, ಅವರ ಕೆಲಸ ನಮಗೆ ಸ್ಪೂರ್ತಿ- ಸಿಎಂ ಸಿದ್ಧರಾಮಯ್ಯ.

ಬೆಂಗಳೂರು, ಜೂನ್,6, 2023(www.justkannada.in): ದೇವರಾಜ ಅರಸು ಅವರು ನಾಡು ಕಂಡ ಮುತ್ಸದಿ ರಾಜಕಾರಣಿ. ಅವರು ಮುಖ್ಯ ಮಂತ್ರಿಯಾಗಿ ಹಾಗೂ ಅವರ ಜೀವಿತ ಕಾಲದಲ್ಲಿ ಮಾಡಿದ ಕೆಲಸ ನಮಗೆ ಸ್ಪೂರ್ತಿ ಎಂದು ಸಿಎಂ ಸಿದ್ಧರಾಮಯ್ಯ ನುಡಿದರು.

ಇಂದು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ 41 ನೇ ಪುಣ್ಯಸ್ಮರಣೆ  ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ  ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಸರ್ಕಾರ ಗೌರವಯುತವಾಗಿ ದೇವರಾಜ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರ ಸ್ಮರಣೆ ಮಾಡಿದೆ. ಸಾಮಾಜಿಕ ನ್ಯಾಯದ ಹರಿಕಾರರಾದ ದೇವರಾಜ ಅರಸು ಅವರು ಅನೇಕ ಸಾಮಾಜಿಕ, ಕ್ರಾಂತಿಕಾರಿ ತೀರ್ಮಾನಗಳನ್ನು ಕೈಗೊಂಡಿದ್ದರು. ಭೂ ಸುಧಾರಣಾ ಕಾಯ್ದೆ, ಜೀತಪದ್ಧತಿ ಮುಕ್ತಿ, ಮಲಹೊರುವ ಪದ್ಧತಿಯನ್ನು ನಿಲ್ಲಿಸಿದ್ದು, ರೈತರ ಸಾಲ ವಿಮೋಚನಾ ಕಾಯ್ದೆ, ಹಾವನೂರು ಆಯೋಗ ರಚಿಸಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ, ಧ್ವನಿಯಿಲ್ಲದ ಜನರ ದನಿಯಾದರು ಎಂದರು.

ರಾಜಕೀಯ ವ್ಯವಸ್ಥೆಯಲ್ಲಿ ಸಾಮಾಜಿಕ ನ್ಯಾಯ.

ಅನೇಕ ಜನರನ್ನು ಶಾಸಕರನ್ನಾಗಿಸಿ ಅವರಿಗೆ ಪ್ರಾತಿನಿಧ್ಯ ನೀಡುವ ಕೆಲಸ  ಮಾಡಿದರು. ರಾಜಕೀಯ ವ್ಯವಸ್ಥೆಯಲ್ಲಿಯೂ ಸಾಮಾಜಿಕ ನ್ಯಾಯ ತರಲು ಶ್ರಮಿಸಿದರು. ಅಧಿಕಾರ ಎಲ್ಲರಿಗೂ ದೊರೆಯಬೇಕೆಂಬ ನಂಬಿಕೆ ಉಳ್ಳವರಾಗಿದ್ದರು. ಉಳುವುವವನೆ ಭೂಮಿ ಒಡೆಯ ಎಂಬ ಕ್ರಾಂತಿಕಾರಿ ತೀರ್ಮಾನಗಳನ್ನು ಮಾಡಿದವರು.  ಅವರ ಕೆಲಸಗಳನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ  ಎಂದರು.

ದೇವರಾಜ ಅರಸು ಅವರು ಕಾಂಗ್ರೆಸ್ ಪಕ್ಷದಿಂದ 1982 ರಿಂದ 80 ರವರೆಗೆ ಮುಖ್ಯಮಂತ್ರಿಯಾಗಿ ಮಾಡಿದ ಕೆಲಸಗಳು ಜನರ ಮನಸ್ಸಿನಲ್ಲಿ ಸದಾ ಉಳಿದಿವೆ ಎಂದು ತಿಳಿಸಿದರು.

Key words: D.Devaraja Arasu- politician – work – inspiration – CM Siddaramaiah.