Thursday, September 17, 2026

BDA Apartments

Home Front Page ವಿದ್ಯುತ್ ದರ ಇಳಿಕೆ ಮಾಡುವಂತೆ ಪ್ರತಿಭಟನೆ: ಮೆಸ್ಕಾ ಕಚೇರಿಗೆ ಕಲ್ಲು ತೂರಿದ ಬಿಜೆಪಿ ಕಾರ್ಯಕರ್ತನ ಬಂಧನ.

ವಿದ್ಯುತ್ ದರ ಇಳಿಕೆ ಮಾಡುವಂತೆ ಪ್ರತಿಭಟನೆ: ಮೆಸ್ಕಾ ಕಚೇರಿಗೆ ಕಲ್ಲು ತೂರಿದ ಬಿಜೆಪಿ ಕಾರ್ಯಕರ್ತನ ಬಂಧನ.

ಶಿವಮೊಗ್ಗ,ಜೂನ್,14,2023(www.justkannada.in): ವಿದ್ಯುತ್ ದರ ಇಳಿಕೆ ಮಾಡುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮೆಸ್ಕಾಂ ಕಚೇರಿಗೆ ಕಲ್ಲು ತೂರಿದ ಬಿಜೆಪಿ ಕಾರ್ಯಕರ್ತನನ್ನ ಪೊಲೀಸರು ಬಂಧಿಸಿದ್ದಾರೆ.

ವಿದ್ಯುತ್ ದರ ಇಳಿಕೆ ಮಾಡುವಂತೆ ಆಗ್ರಹಿಸಿ ಶಿವಮೊಗ್ಗದ ಮೆಸ್ಕಾಂ ಕಚೇರಿ ಮುಂದೆ ಶಾಸಕ ಎಸ್,ಎನ್  ಚನ್ನಬಸಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತ ಮುರುಗೇಶ್ ಎಂಬುವವರು ಮೆಸ್ಕಾಂ ಕಚೇರಿಗೆ ಕಲ್ಲು ತೂರಿದ್ದು ಕಚೇರಿಯ ಗಾಜು ಪುಡಿಪುಡಿಯಾಗಿದೆ.ವಿದ್ಯುತ್ ದರ ಇಳಿಕೆ ಮಾಡುವಂತೆ ಪ್ರತಿಭಟನೆ protest

ತಕ್ಷಣ ಮುರುಗೇಶ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಇನ್ನು ವಿದ್ಯುತ್ ದರ ಏರಿಕೆ ಹಿನ್ನೆಲೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದು, ಶಾಸಕ ಎಸ್,ಎನ್ ಚನ್ನಬಸಪ್ಪ ಸೇರಿ ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದರು.

Key words:   Protest – reduce –electricity- rates-BJP worker- arrested