Friday, August 14, 2026

BDA Apartments

Home Front Page ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಮಳೆಯನ್ನೂ ಲೆಕ್ಕಿಸದೆ ಮಾಜಿ ಸಚಿವರ ನೇತೃತ್ವದಲ್ಲಿ ರಸ್ತೆ ತಡೆದು ಬೃಹತ್...

ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಮಳೆಯನ್ನೂ ಲೆಕ್ಕಿಸದೆ ಮಾಜಿ ಸಚಿವರ ನೇತೃತ್ವದಲ್ಲಿ ರಸ್ತೆ ತಡೆದು ಬೃಹತ್ ಪ್ರತಿಭಟನೆ…

ಚಾಮರಾಜನಗರ,ಸೆ,4,2019(www.justkannada.in):  ಜಾರಿ ನಿರ್ದೇಶನಾಲಯದಿಂದ  ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧಿಸಿರುವುದನ್ನ ಖಂಡಿಸಿ ಚಾಮರಾಜನಗರದಲ್ಲಿ ಕಾಂಗ್ರೆಸ ಕಾರ್ಯಕರ್ತರು ಮಳೆಯನ್ನು ಲೆಕ್ಕಿಸದೆ ಪ್ರತಿಭಟನೆ ನಡೆಸಿದರು.

ಶಾಸಕ ಹಾಗೂ ಮಾಜಿ ಸಚಿವ  ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ ನೇತೃತ್ವದಲ್ಲಿ ಚಾಮರಾಜನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು  ಬೃಹತ್ ಪ್ರತಿಭಟನೆ ನಡೆಸಿದರು.  ರಾಷ್ಟ್ರೀಯ ಹೆದ್ದಾರಿ -209ರ ಸಂಚಾರ ತಡೆದು ಪ್ರತಿಭಟನಾಕಾರರು ಬಿಜೆಪಿ ನಾಯಕರ ವಿರುದ್ಧ ಧಿಕ್ಕಾರಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ವೇಳೆ ಮಳೆ ಸುರಿಯುತ್ತಿದ್ದರೂ ಮಳೆಯನ್ನು ಲೆಕ್ಕಸದೇ ಕಾಂಗ್ರೆಸ್ ಕಾರ್ಯಕರ್ತರು ಮಳೆ ಯಲ್ಲೇ ಪ್ರತಿಭಟನೆ ಮಾಡಿದರು. ಸುಮಾರು 40 ನಿಮಿಷಗಳ ಕಾ ಲ ಮಳೆಯಲ್ಲೇ ನೆನೆದು ಧರಣಿ ನಡೆಸಿದರು. ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ನೂರಾರು ಜನ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಭಾಗಿಯಾಗಿದ್ದರು. ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯಿಂದ ರಸ್ತೆ ಸಚಾರ ಅಸ್ತವ್ಯಸ್ತಗೊಂಡಿತ್ತು.

Key words: DK Sivakumar- arrest – massive protest –rains-chamarajanagar