Thursday, August 20, 2026

BDA Apartments

Home Front Page ನನಗೆ ಹೈಕಮಾಂಡ್ ಭರವಸೆ ನೀಡಿದೆ: ನಾನು ಮಂಡ್ಯ ಬಿಟ್ಟು ಹೋಗಲ್ಲ- ಸಂಸದೆ ಸುಮಲತಾ ಅಂಬರೀಶ್.

ನನಗೆ ಹೈಕಮಾಂಡ್ ಭರವಸೆ ನೀಡಿದೆ: ನಾನು ಮಂಡ್ಯ ಬಿಟ್ಟು ಹೋಗಲ್ಲ- ಸಂಸದೆ ಸುಮಲತಾ ಅಂಬರೀಶ್.

ಮಂಡ್ಯ,ಮಾರ್ಚ್,7,2024(www.justkannada.in):  ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಟಿಕೆಟ್ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಸಂಸದೆ ಸುಮಲತಾ ಅಂಬರೀಶ್, ನಾನು ಮಂಡ್ಯ ಬಿಟ್ಟು ಹೋಗಲ್ಲ. ನನಗೆ ಬಿಜೆಪಿ ಹೈಕಮಾಂಡ್ ಭರವಸೆ ನೀಡಿದೆ. ಬಿಜೆಪಿ ಟಿಕೆಟ್ ಸಿಗಲಿಲ್ಲ ಅಂದ್ರೆ ಮುಂದೆ ನೋಡೋಣ ಎಂದು ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಬಿಜೆಪಿ ವರಿಷ್ಠರು ವಿಶ್ವಾಸದ ಮಾತುಗಳು, ಪ್ರೋತ್ಸಾಹದ ಮಾತುಗಳನ್ನು ಕೊಟ್ಟಿದ್ದಾರೆ.  ಹೈಕಮಾಂಡ್ ನನಗೆ ಭರವಸೆ ನೀಡಿದೆ.  ಬಿಜೆಪಿಯಲ್ಲಿ ನನ್ನ ಬಗ್ಗೆ ಗೌರವ ಇದೆ. ನೀವು ನಮ್ಮ ಪಕ್ಷಕ್ಕೆ ಬೇಕು. ಮಂಡ್ಯ ಭಾಗದಲ್ಲಿ ಬಿಜೆಪಿ ಬೆಳೆಸಲು ನಿಮ್ಮ ಶಕ್ತಿ ಬೇಕು ಎಂದು ಕಳೆದ ಬಾರಿ ವಿಧಾನಸಭೆ ಚುನಾವಣೆ ವೇಳೆ ಹೇಳಿಯೇ ಬೆಂಬಲವನ್ನು ಪಡೆದುಕೊಂಡಿದ್ದಾರೆ ಎಂದರು.

ಮಂಡ್ಯ  ಕ್ಷೇತ್ರ ಜೆಡಿಎಸ್  ಪಾಲಾದರೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಂಸದೆ ಸುಮಲತಾ ಅಂಬರೀಶ್, ರಾಜಕೀಯದಲ್ಲಿ ಏನು ಬೇಕಾದರೂ ಆಗಲಿ. ಯಾರೂ ಅಂದುಕೊಂಡಿದ್ದೆಲ್ಲ ಆಗಬೇಕು ಎಂದು ಕುಳಿತುಕೊಳ್ಳುವುದಿಲ್ಲವಲ್ಲ. ನಮ್ಮದೇ ಆದ ನಿರ್ಧಾರ ಕೈಗೊಳ್ಳಬಹುದಲ್ಲ. ಟಿಕೆಟ್ ಘೋಷಣೆ ಆದ ಮೇಲೆ ನೋಡೋಣ ಎಂದು ತಿಳಿಸಿದರು.

Key words:  High Command- assured- me: I will -not leave -Mandya – MP -Sumalatha Ambarish.