Friday, August 7, 2026

BDA Apartments

Home Front Page ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ: ಏಳು ಜೈಲು ಸಿಬ್ಬಂದಿ ಸಸ್ಪೆಂಡ್- ಗೃಹ ಸಚಿವ ಡಾ....

ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ: ಏಳು ಜೈಲು ಸಿಬ್ಬಂದಿ ಸಸ್ಪೆಂಡ್- ಗೃಹ ಸಚಿವ ಡಾ. ಜಿ. ಪರಮೇಶ್ವರ್

ಬೆಂಗಳೂರು,ಆಗಸ್ಟ್,36,2024 (www.justkannada.in):  ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ 7 ಜೈಲು ಸಿಬ್ಬಂದಿಯನ್ನ ಸಸ್ಪೆಂಡ್ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.

ಈ ಕುರಿತು ಇಂದು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವ‍ರ್, ಜೈಲರ್ ಶರಣಬಸವ ಅಮೀನಗಢ, ಸಹಾಯಕ ಜೈಲರ್ ಪುಟ್ಟಸ್ವಾಮಿ,  ಜೈಲರ್ ಹೆಡ್ ವಾರ್ಡರ್ ಗಳಾದ ವೆಂಕಪ್ಪ, ಸಂಪತ್,  ವಾರ್ಡರ್ ಬಸಪ್ಪ, ಪ್ರಭು, ಶ್ರೀಕಾಂತ್  ಏಳು ಮಂದಿಯನ್ನ ಸಸ್ಪೆಂಡ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು

ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಹಿರಿಯ ಅಧಿಕಾರಿಗಳ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

Key words: suspension, prison staff, actor, Darshan, jail