Saturday, August 15, 2026

BDA Apartments

Home Front Page ಸಂಪುಟ ಪುನರಚನೆ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಸಂಪುಟ ಪುನರಚನೆ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ನವದೆಹಲಿ,ನವೆಂಬರ್,29,2024 (www.justkannada.in): ರಾಜ್ಯದಲ್ಲಿ ಚರ್ಚೆಯಾಗುತ್ತಿರುವ ಸಚಿವ ಸಂಪುಟ ಪುನರಚನೆ ಕುರಿತು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ನವದೆಹಲಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಚಿವ ಸಂಪುಟ ವಿಸ್ತರಣೆ, ಪುನರಚನೆ ಕುರಿತಾದ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಮಾಧ್ಯಮಗಳವರೇ ಹೊರತು ನಾನಲ್ಲ ಎಂದು ಹೇಳಿದರು.

ಸಂಪುಟ ವಿಸ್ತರಣೆ, ಪುನಾರಚನೆ ಉದ್ದೇಶ ಸದ್ಯಕ್ಕಿಲ್ಲ. ಮಾಧ್ಯಮಗಳೇ ಈ ಬಗ್ಗೆ ಸುದ್ದಿಗಳನ್ನು ಬಿತ್ತರಿಸುತ್ತಿವೆ. ಸಂಭವನೀಯ ಸಚಿವರ ಪಟ್ಟಿಯನ್ನೂ ಪ್ರಕಟಿಸುತ್ತಿವೆ. ಹೀಗಾಗಿ ಪುನಾರಚನೆ, ವಿಸ್ತರಣೆ ಕುರಿತಾದ ಪ್ರಶ್ನೆಗಳಿಗೆ ಮಾಧ್ಯಮಗಳೇ ಉತ್ತರಿಸಬೇಕು ಎಂದರು.

ಸಂಪುಟ ಪುನಾರಚನೆ, ವಿಸ್ತರಣೆ ಕುರಿತಂತೆ ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ. ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ. ಆದರೆ ಈಗಲೇ ಅಲ್ಲ ಎಂದು ಹೇಳಿದರು.

ಹಾಸನದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ಆಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಅಯೋಜಿಸಲಾಗಿದೆ.  ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನೂ ಸಂಘಟಕರು ಆಹ್ವಾನಿಸಿದ್ದಾರೆ.  ಸಮಾವೇಶ ಕುರಿತಂತೆ ಹೈಕಮಾಂಡ್ ಗೆ ಅನಾಮಧೇಯ ಪತ್ರ ಬರೆದಿರುವ ಬಗ್ಗೆ ಮಾಹಿತಿ ಇಲ್ಲ. ಖರ್ಗೆ ಅವರೂ ಈ ಬಗ್ಗೆ ಚರ್ಚೆ ಮಾಡಲಿಲ್ಲ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.

Key words: Cabinet expansion, CM Siddaramaiah, clarifies