Wednesday, July 29, 2026

BDA Apartments

Home Front Page ಬಾಣಂತಿಯರ ಸಾವು : ಸಮಿತಿ ವರದಿ ಬಂದ ನಂತರ ಸೂಕ್ತ ಕ್ರಮ- ಸಿಎಂ ಸಿದ್ದರಾಮಯ್ಯ

ಬಾಣಂತಿಯರ ಸಾವು : ಸಮಿತಿ ವರದಿ ಬಂದ ನಂತರ ಸೂಕ್ತ ಕ್ರಮ- ಸಿಎಂ ಸಿದ್ದರಾಮಯ್ಯ

ಚಾಮರಾಜನಗರ, ಡಿಸೆಂಬರ್, 7,2024 (www.justkannada.in): ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು  ಪ್ರಕರಣ ಸಂಬಂಧ ಸಮಿತಿ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು  ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಚಾಮರಾಜ ನಗರ ಜಿಲ್ಲಾ ಪ್ರವಾಸ  ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಇಂದು ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದಲ್ಲಿ ಸರ್ಕಾರಿ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರಯ.

ಇದಕ್ಕೂ ಮುನ್ನ  ಚಾಮರಾಜನಗರದ ನರಿಪುರ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಬಳ್ಳಾರಿ ಆಸ್ಪತ್ರೆಗೆ ಇಂದು ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಬಾಣಂತಿ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ  ಎಂದು ತಿಳಿಸಿದರು.

ಬಳ್ಳಾರಿ ಆಸ್ಪತ್ರೆಯ ಮೇಲೆ ಇಂದು  ಲೋಕಾಯುಕ್ತ ದಾಳಿಯಾಗಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ನಾಲ್ಕು ಬಾಣಂತಿಯರು ಮರಣ ಹೊಂದಿದಾಗ ಸಭೆ ಕರೆಯಲಾಗಿತ್ತು.  ಐದನೇ ಬಾಣಂತಿ ಮೃತಪಟ್ಟಿರುವ ಬಗ್ಗೆ  ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚೆ ನಡೆದಿದೆ.  ಕಳಪೆ ಗುಣಮಟ್ಟದ  ಔಷಧ ಸರಬರಾಜು ಮಾಡುತ್ತಿರುವ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಹಾಗೂ ಔಷಧ ನಿಯಂತ್ರಕರನ್ನು ಅಮಾನತು ಮಾಡಲಾಗಿದೆ ಎಂದರು.

ತಪ್ಪಿತಸ್ಥರ ಮೇಲೆ ಕ್ರಮ

ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ವರದಿ ಸಲ್ಲಿಸಲು ಸೂಚಿಸಿದೆ. ವರದಿ ಬಂದ ನಂತರ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

Key words: Ballari- District Hospital, action, report, CM Siddaramaiah