Thursday, August 6, 2026

BDA Apartments

Home Cinema ತೆಲುಗು ನಟ ಅಲ್ಲು ಅರ್ಜುನ್ ಗೆ ಮಧ್ಯಂತರ ಜಾಮೀನು ಮಂಜೂರು

ತೆಲುಗು ನಟ ಅಲ್ಲು ಅರ್ಜುನ್ ಗೆ ಮಧ್ಯಂತರ ಜಾಮೀನು ಮಂಜೂರು

ಹೈದರಾಬಾದ್​, ಡಿಸೆಂಬರ್,13,2024 (www.justkannada.in):  ಸಂಧ್ಯಾ ಚಿತ್ರಮಂದಿರ ಬಳಿ ಕಾಲ್ತುಳಿತದಿಂದ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಡಿಸೆಂಬರ್ 4ರಂದು ಹೈದರಾಬಾದಿನ ಸಂಧ್ಯಾ ಚಿತ್ರಮಂದಿರದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್​ಗೆ ನಾಂಪಲ್ಲಿ ಕೋರ್ಟ್​ 14ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.

ಕಾಲ್ತುಳಿದಿಂದ ಮಹಿಳೆ ಸಾವು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟ ಅಲ್ಲು ಅರ್ಜುನ್​ಗೆ ತೆಲಂಗಾಣ ಹೈಕೋರ್ಟ್​ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಅಲ್ಲು ಅರ್ಜುನ್ 14 ದಿನಗಳ ಜೈಲು ವಾಸದಿಂದ ತಪ್ಪಿಸಿಕೊಂಡಂತಾಗಿದೆ.

Key words: Telugu actor, Allu Arjun, granted, interim bail