Friday, August 14, 2026

BDA Apartments

Home Front Page ಪರಿಸ್ಥಿತಿ ನಿಯಂತ್ರಣದಲ್ಲಿದೆ: ವದಂತಿಗಳಿಗೆ ಕಿವಿ ಕೊಡಬೇಡಿ- ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮನವಿ

ಪರಿಸ್ಥಿತಿ ನಿಯಂತ್ರಣದಲ್ಲಿದೆ: ವದಂತಿಗಳಿಗೆ ಕಿವಿ ಕೊಡಬೇಡಿ- ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮನವಿ

ಲಕ್ನೋ,ಜನವರಿ,29,2025 (www.justkannada.in):  ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣ ಸಂಬಂಧ ಘಟನಾ ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು,  ಭಕ್ತರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮನವಿ ಮಾಡಿದ್ದಾರೆ.

ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಬಂಧ ಸಭೆ ನಡೆಸಿದ ಬಳಿಕ ಮಾತನಾಡಿರುವ ಯುಪಿ ಸಿಎಂ ಯೋಗಿ ಆದಿತ್ಯನಾಥ್, ‘ಪ್ರಯಾಗ್‌ ರಾಜ್‌ನಲ್ಲಿ ಇಂದು ಸುಮಾರು 8ರಿಂದ 10 ಕೋಟಿ ಭಕ್ತರು ಸೇರಿದ್ದಾರೆ. ತ್ರಿವೇಣಿ ಸಂಗಮದತ್ತ ಅಸಂಖ್ಯಾತ ಜನರು ಸೇರುತ್ತಿದ್ದಾರೆ. ಅಖಾರ ಮಾರ್ಗದಲ್ಲಿ ಬ್ಯಾರಿಕೇಡ್‌ಗಳನ್ನು ದಾಟಲು ಪ್ರಯತ್ನಿಸಿದಾಗ ಕಾಲ್ತುಳಿತ ಸಂಭವಿಸಿ ಕೆಲವು ಭಕ್ತರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ’ ಎಂದು  ಮಾಹಿತಿ ನೀಡಿದರು.

ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ, ಡಿಜಿಪಿ, ಗೃಹ ಕಾರ್ಯದರ್ಶಿ, ಸಿಎಂ ಕಚೇರಿ ಅಧಿಕಾರಿಗಳು ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅವರೊಂದಿಗೆ ಸಭೆ ನಡೆಸಿದ್ದು, ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದ್ದೇವೆ. ಸದ್ಯ ಪ್ರಯಾಗ್‌ ರಾಜ್‌ನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಭಕ್ತರು ಯಾವುದೇ ವದಂತಿಗಳಿಗೆ ಕಿವಿ ಕೊಡಬಾರದು ಎಂದು ಭಕ್ತರಿಗೆ ಮನವಿ ಮಾಡುತ್ತೇನೆ’ ಎಂದಿದ್ದಾರೆ.

Key words: Mahakumba mela, Situation,control, UP CM, Yogi Adityanath