Tuesday, August 18, 2026

BDA Apartments

Home Front Page ಜಮ್ಮು ಕಾಶ್ಮೀರದಿಂದ ಬೆಂಗಳೂರಿಗೆ 178 ಕನ್ನಡಿಗರು ಸುರಕ್ಷಿತವಾಗಿ ವಾಪಸ್

ಜಮ್ಮು ಕಾಶ್ಮೀರದಿಂದ ಬೆಂಗಳೂರಿಗೆ 178 ಕನ್ನಡಿಗರು ಸುರಕ್ಷಿತವಾಗಿ ವಾಪಸ್

ಬೆಂಗಳೂರು, ಏಪ್ರಿಲ್,24,2025 (www.justkannada.in): ಜಮ್ಮು ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿ ಬಳಿಕ ಇದೀಗ ಶ್ರೀನಗರದಿಂದ 178 ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಕ್ಕೆ ಬಂದಿಳಿದಿದ್ದಾರೆ.

ಇಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ 178 ಕನ್ನಡಿಗರು  ಶ್ರೀನಗರದಿಂದ ತಾಯ್ನಾಡಿಗೆ ಸುರಕ್ಷಿತವಾಗಿ ವಾಪಸ್ ಆಗಿದ್ದಾರೆ. ಜಮ್ಮು ಕಾಶ್ಮೀರಕ್ಕೆ ತೆರಳಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರ್ನಾಟಕಕ್ಕೆ  ವಾಪಸ್ ಕರೆ ತರಲು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರಕ್ಕೆ ತೆರಳಿದ್ದ ಸಚಿವ ಸಂತೋಷ್ ಲಾಡ್  ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡಿಗರನ್ನ ಸಂಪರ್ಕಿಸಿದ್ದರು. ಇದೀಗ  178 ಕನ್ನಡಿಗರು  ಶ್ರೀನಗರದ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ(ಇಂಡಿಗೋ-6E 9198) ಮೂಲಕ ಬೆಂಗಳೂರಿಗೆ ಆಗಮಿಸಿದ್ದಾರೆ

ಇಂದು ಬೆಳಗ್ಗೆ 8:45ಕ್ಕೆ ಶ್ರೀನಗರ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ ಹೊರಟಿದ್ದು,ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇದೀಗ ಬಂದಿಳಿದಿದೆ.

Key words: 178 Kannadigas, return, Bangalore, from, Jammu and Kashmir