ಉಗ್ರರ ವಿರುದ್ದ ಭಾರತದ ಸಮರ ನಿರಂತರವಾಗಿರುತ್ತೆ- ವಿದೇಶಾಂಗ ಸಚಿವ ಜೈಶಂಕರ್

ನವದೆಹಲಿ,ಮೇ,10,2025 (www.justkannada.in):  ಭಾರತ-ಪಾಕಿಸ್ತಾನದ ನಡುವೆ ಉಂಟಾಗಿದ್ದ ಉದ್ವಿಗ್ನತೆ ತಣ್ಣಗಾಗುತ್ತಿದ್ದು ಕದನ ವಿರಾಮಕ್ಕೆ ಒಪ್ಪಿಗೆ ನೀಡಿರುವ ಬಗ್ಗೆ ಈಗಾಗಲೇ ಮಾಹಿತಿ ತಿಳಿದು ಬಂದಿದೆ.

ಈ ಕುರಿತು ಟ್ವೀಟ್ ಮಾಡಿರುವ ವಿದೇಶಾಂಗ ಇಲಾಖೆ ಸಚಿವ ಜೈ ಶಂಕರ್ ,  ಉಗ್ರರ ವಿರುದ್ದ ಭಾರತದ ಸಮರ ನಿರಂತರವಾಗಿರುತ್ತದೆ.  ಸೇನಾ ಪಡೆ ಕಾರ್ಯಾಚರಣೆ ಸ್ಥಗಿತಗೊಂಡಿದೆ.  ಭಾರತ ಪಾಕ್ ನಡುವೆ ಕದನ ವಿರಾಮ ಘೋಷಣೆಗೆ ಸಮ್ಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿ ಭಾರತ-ಪಾಕಿಸ್ತಾನ ಕದಮ ವಿರಾಮಕ್ಕೆ ಒಪ್ಪಿಕೆ ಸೂಚಿಸಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು.

Key words: India,  war, against, terrorist, continuous- Foreign Minister, Jaishankar