Thursday, July 30, 2026

BDA Apartments

Home Crime ಕಾಲ್ತುಳಿತದಿಂದ 11 ಮಂದಿ ಸಾವು ಕೇಸ್ : `FIR’ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ KSCA

ಕಾಲ್ತುಳಿತದಿಂದ 11 ಮಂದಿ ಸಾವು ಕೇಸ್ : `FIR’ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ KSCA

ಬೆಂಗಳೂರು,ಜೂನ್,6,2025 (www.justkannada.in): ಚಿನ್ನಸ್ವಾಮಿಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತದಿಂದ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ತಮ್ಮ ವಿರುದ್ದ ದಾಖಲಾಗಿರುವ ಎಫ್ ಐಆರ್ ರದ್ದುಗೊಳಿಸುವಂತೆ ಕೋರಿ ಕೆಎಸ್ ಸಿಎ ಅಡಳಿತ ಮಂಡಳಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದೆ.

ಕೆಎಸ್ ಸಿಎ ಆಡಳಿತ ಮಂಡಳಿ ಅಧ್ಯಕ್ಷ ರಘುರಾಮ್ ಭಟ್, ಕಾರ್ಯದರ್ಶಿ ಎ.ಶಂಕರ್, ಖಜಾಂಚಿ ಇ.ಎಸ್. ಜೈರಾಮ್ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಎಫ್ ಐಆರ್ ರದ್ದು ಮಾಡುವಂತೆ ಕೊರಿ ಕೆಎಸ್ ಸಿಎ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

ಪ್ರಕರಣ ಸಂಬಂಧ ನಿನ್ನೆ ಆರ್ ಸಿಬಿ ಮ್ಯಾನೇಜ್ ಮೆಂಟ್ , ಕೆಎಸ್ ಸಿಎ, ಡಿಎನ್ ಎ ಇವೆಂಟ್ ಮ್ಯಾನೇಜ್ ಮೆಂಟ್ ವಿರುದ್ದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಎಫ್ ಐಆರ್ ರದ್ದು ಕೋರಿ KSCA ಹೈಕೋರ್ಟ್ ಮೆಟ್ಟಿಲೇರಿದೆ.vtu

Key words: 11 people, died , stampede, KSCA, High Court