Tuesday, August 4, 2026

BDA Apartments

Home Front Page ಖಾತೆ ಬದಲಾವಣೆ ಸುಳ್ಳು, ಸತ್ಯಕ್ಕೆ ದೂರವಾದದ್ದು-ಗೃಹ ಸಚಿವ ಡಾ.ಜಿ.ಪರಮೇಶ್ವರ್

ಖಾತೆ ಬದಲಾವಣೆ ಸುಳ್ಳು, ಸತ್ಯಕ್ಕೆ ದೂರವಾದದ್ದು-ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಜೂನ್​,9,2025 (www.justkannada.in): ಖಾತೆ ಬದಲಾವಣೆ ಎಂಬುದು ವದಂತಿ. ಇದು ಸತ್ಯಕ್ಕೆ ದೂರವಾದದ್ದು, ಸುಳ್ಳು ಎಂದು ಗೃಹ ಸಚಿವ  ಡಾ. ಜಿ. ಪರಮೇಶ್ವರ್​ ತಿಳಿಸಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂನ ಕಾಲ್ತುಳಿತ ಪ್ರಕರಣ ಬೆನ್ನಲ್ಲೆ  ಗೃಹ ಸಚಿವ ಜಿ ಪರಮೇಶ್ವರ್, ಖಾತೆ ಬದಲಾಯಿಸಲು ಕೇಳಿದ್ದಾರೆ ಎಂಬ ವದಂತಿ ಹಬ್ಬಿತ್ತು. ಈ ಕುರಿತು ಮಾತನಾಡಿರುವ ಪರಮೇಶ್ವರ್, ಖಾತೆ ಬದಲಾವಣೆಯ ಬಗ್ಗೆ ನಾನು ಸಿಎಂ ಬಳಿ ಹೇಳಿಕೊಂಡಿಲ್ಲ. ಖಾತೆ ಬದಲಾವಣೆಗೆ ಕೇಳಿದ್ದೇನೆ ಅನ್ನೋ ವಿಚಾರವನ್ನು ಹೇಳಿದ್ಯಾರು? ಏನೇ ಇದ್ದರೂ ನನ್ನನ್ನೇ ಕೇಳಬೇಕು ಅಲ್ಲವೇ. ನಾನು ಸಂಯಮದಿಂದಲೇ ನಡೆದುಕೊಂಡಿದ್ದೇನೆ. ಒಬ್ಬರ ವ್ಯಕ್ತಿತ್ವ ಕೊಲೆ ಮಾಡಬಾರದು, ಇದು ಶೋಭೆ ತರುವುದಿಲ್ಲ. ಏನೇ ಇದ್ದರೂ ನನ್ನನ್ನೇ ಕೇಳಿ, ಉತ್ತರ ಕೊಡುತ್ತೇನೆ ಎಂದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ​ಗೆ  ದೂರವಾಣಿ ಮೂಲಕ ಮಾಹಿತಿ ನೀಡಿದ್ದೇವೆ.  ಆದರೆ ಯಾರೂ ನಮ್ಮನ್ನು ದೆಹಲಿಗೆ ಕರೆದಿಲ್ಲ, ಮುಂಬೈಗೂ ಕರೆದಿಲ್ಲ. ಇದು ಸತ್ಯಕ್ಕೆ ದೂರವಾದದ್ದು. ಹೈಕಮಾಂಡ್​ ನವರು ಮಾಹಿತಿ ಕೇಳುತ್ತಾರೆ, ಅವರಿಗೆ ಆತಂಕ ಇರುತ್ತೆ. ಅದಕ್ಕಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಬಳಿ ಮಾಹಿತಿ ಕೇಳುತ್ತಾರೆ ಎಂದರು.vtu

Key words: Home Minister, Change, Dr. G. Parameshwar, lie