Saturday, August 1, 2026

BDA Apartments

Home Front Page ಕೆಆರ್ ಎಸ್ ಜಲಾಶಯದ ಒಳ ಹರಿವು ಹೆಚ್ಚಳ : 111 ಅಡಿಗೆ ತಲುಪಿದ ನೀರಿನ ಮಟ್ಟ

ಕೆಆರ್ ಎಸ್ ಜಲಾಶಯದ ಒಳ ಹರಿವು ಹೆಚ್ಚಳ : 111 ಅಡಿಗೆ ತಲುಪಿದ ನೀರಿನ ಮಟ್ಟ

ಮಂಡ್ಯ ಜೂನ್,17,2025 (www.justkannada.in): ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಈ ಬಾರಿಯೂ ಕೂಡ ಉತ್ತಮ ಮಳೆಯಾಗುತ್ತಿದೆ. ಈ ನಡುವೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ ಎಸ್ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ.

ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್ ಎಸ್ ಜಲಾಶಯಕ್ಕೆ ನೀರು ಹರಿದು ಬರುತ್ತಿದ್ದು  ಟಯಾ ಒಳ ಹರಿವು 16 ಸಾವಿರ ಕ್ಯೂಸೆಕ್ ಗೆ ಏರಿಕೆಯಾಗಿದೆ.  ಕೆಆರ್ ಎಸ್ ಡ್ಯಾಂ ನೀರಿನ ಮಟ್ಟ111 ಅಡಿಗೆ ತಲುಪಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿದ್ದು ಕಾವೇರಿ ಲಕ್ಷಣ ತೀರ್ಥ ನದಿಗಳು ಉಕ್ಕಿ ಹರಿಯುತ್ತಿವೆ.  ಈ ಹಿನ್ನೆಲೆಯಲ್ಲಿ ಭಾಗಮಂಡಲದ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತವಾಗಿದೆ.  ಭಾಗಮಂಡಲ- ನಾಪೋಕ್ಲು ರಸ್ತೆ ಜಲಾವೃತವಾಗಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.vtu

Key words: Rain, KRS, reservoir, inflow, increases