ಕೊಟ್ಟೆಯೂರು ದೇವಾಲಯಕ್ಕೆ ನಟ ದರ್ಶನ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಕೇರಳ, ಜೂನ್,18,2025 (www.justkannada.in):  ನಟ ದರ್ಶನ್ ಇಂದು ಕುಟುಂಬದ ಜೊತೆ ಕೇರಳದ ಕೊಟ್ಟೆಯೂರು ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ.

ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ಬಳಿಕ ನಟ ದರ್ಶನ್ ಹೆಚ್ಚು  ದೇವಾಲಯಗಳಿಗೆ ಭೇಟಿ ಕೊಡುತ್ತಿದ್ದಾರೆ . ಚಾಮುಂಡೇಶ್ವರಿ ದೇವಾಲಯ, ಗೌಡಗೆರೆ ಚಾಮುಂಡೇಶ್ವರಿ ದೇವಾಲಯ, ಬನಶಂಕರಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಹಾಗೆಯೇ ಕೇರಳದ ಶ್ರೀ ಭಗವತಿ ದೇವಾಲಯಕ್ಕೆ ಭೇಟಿ ನೀಡಿ ಶತ್ರು ಸಂಹಾರ ಪೂಜೆಯನ್ನು ಸಹ ಮಾಡಿಸಿದ್ದರು.

ಇದೀಗ  ಕೇರಳದ ಕೊಟ್ಟೆಯೂರು ದೇವಾಲಯಕ್ಕೆ ನಟ ದರ್ಶನ್ ಭೇಟಿ ನೀಡಿದ್ದಾರೆ. ನಟ ದರ್ಶನ್ ಗೆ ಪತ್ನಿ ವಿಜಯಲಕ್ಷ್ಮೀ ಹಾಗೂ ಧನ್ವೀರ್ ಗೌಡ  ಸಾಧನ್ ನೀಡಿದ್ದಾರೆ. ನಟ ದರ್ಶನ್, ‘ಡೆವಿಲ್’ ಸಿನಿಮಾದ ಚಿತ್ರೀಕರಣ ಮುಗಿಸಿರುವ ಕಾರಣ ದೇವಾಲಯಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾದ ಚಿತ್ರೀಕರಣ ಮುಗಿದಿದ್ದು ಪೋಸ್ಟ್ ಪ್ರೊಡಕ್ಷನ್ ಚಾಲ್ತಿಯಲ್ಲಿದೆ.vtu

Key words: Actor Darshan,  visits, Kotteyur temple, special prayers