Saturday, August 15, 2026

BDA Apartments

Home Crime ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಲಂಚ ಪಡೆದ ಆರೋಪ : ರಾಜ್ಯಪಾಲರಿಗೆ ದೂರು  

ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಲಂಚ ಪಡೆದ ಆರೋಪ : ರಾಜ್ಯಪಾಲರಿಗೆ ದೂರು  

ಬೆಂಗಳೂರು ,ಜೂನ್,23,2025 (www.justkannada.in):  ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಹಣ ಪಡೆಯುತ್ತಿದ್ದಾರೆ ಎಂಬ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಆಡಿಯೋ ವೈರಲ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯಪಾಲ ಥಾವರ್ ಚಂದ್ ಗೆ‍ಹ್ಲೋಟ್ ಅವರಿಗೆ ದೂರು ಸಲ್ಲಿಕೆಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ  ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ದೂರು ಸಲ್ಲಿಸಿದ್ದು ತನಿಖೆಗೆ ಆದೇಶ ನೀಡುವಂತೆ ಮನವಿ ಮಾಡಿದ್ದಾರೆ.

ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಹೇಳಿಕೆಯಿಂದ ಸರ್ಕಾರದ ಭ್ರಷ್ಟಾಚಾರ ಹೊರಬಂದಿದೆ. ಬಡವರಿಗೆ ಹಂಚುವ ಮನೆಗಳಲ್ಲಿ ಹಣ ವಸೂಲಿ ಮಾಡಲಾಗುತ್ತಿದೆ. ಬಿ.ಆರ್ ಪಾಟೀಲ್ ಅಧಿಕೃತ ಹೇಳಿಕೆಯನ್ನು ಆಧಾರವಾಗಿ ಪರಿಗಣಿಸಿ. ಕೇವಲ ಒಂದು ಇಲಾಖೆ ಅಥವಾ ನಿರ್ದಿಷ್ಟ ಅಧಿಕಾರಿಗಳ ವೈಫಲ್ಯವಲ್ಲ ಇದು ಸರ್ಕಾರದ ಆಡಳಿತಾತ್ಮಕ ವೈಫಲ್ಯ. ಹೀಗಾಗಿ  ಭ್ರಷ್ಟಾಚಾರದಲ್ಲಿ ತೊಡಗಿರುವ ಎಲ್ಲಾ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಎಂದು ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು ನೀಡಿದ್ದಾರೆ ಎನ್ನಲಾಗಿದೆ.vtu

Key words: Allegations, bribery, housing scheme,  Complaint, Governor