Friday, August 14, 2026

BDA Apartments

Home Cinema ಕೋರ್ಟ್ ಗೆ ನಟ ದರ್ಶನ್ ಸೇರಿ ಇತರೆ ಆರೋಪಿಗಳು ಹಾಜರು

ಕೋರ್ಟ್ ಗೆ ನಟ ದರ್ಶನ್ ಸೇರಿ ಇತರೆ ಆರೋಪಿಗಳು ಹಾಜರು

ಬೆಂಗಳೂರು ,ಆಗಸ್ಟ್,12,2025 (www.justkannada.in):  ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿ ನಟ ದರ್ಶನ್ ಇಂದು ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಗೆ ವಿಚಾರಣೆಗೆ ಹಾಜರಾಗಿದ್ದಾರೆ.

ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರೆ ಆರೋಪಿಗಳು  ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಗೆ ವಿಚಾರಣೆಗಾಗಿ ಕೋರ್ಟ್ ಗೆ ಹಾಜರಾಗಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪವಿತ್ರಗೌಡಗೆ ಈಗಾಗಲೇ ಹೈಕೋರ್ಟ್ ನಿಂದ  ಜಾಮೀನು ಮಂಜೂರಾಗಿದೆ.

ನಟ ದರ್ಶನ್ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ  ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

Key words: Actor, Darshan, accused, present, court