ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಆರೋಪಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಸಾಮಾಜಿಕ ಜಾಲತಾಣದಲ್ಲಿ ಪರ ವಿರೊಧ ಚರ್ಚೆಯಾಗುತ್ತಿದೆ.  ತನಿಖೆಯ ನಂತರವಷ್ಟೆ ಸತ್ಯಾಂಶ ಹೊರಬರಲಿದೆ  ಎಂದು ತಿಳಿಸಿದರು.

ಸದನದಲ್ಲಿ ಇಂದು ಪರಮೇಶ್ವರ ಮಾತನಾಡುತ್ತಾರೆ. ಈ ವಿಚಾರದಲ್ಲಿ ವೀರೆಂದ್ರ ಹೆಗಡೆ  ಅವರನ್ನ ತರಲೇಬಾರದು. ದೂರುದಾರ ಹೇಳಿದ   ಹಲವು ಕಡೆಗಳಲ್ಲಿ ಆಗೆದಾಗಿದೆ. ಆದರೆ ಏನೂ ಕುರುಹುಗಳು ಪತ್ತೆಯಾಗಿಲ್ಲ ಎಂದು ರಾಮಲಿಂಗರೆಡ್ಡಿ ತಿಳಿಸಿದರು.

Key words: BJP,  politics , Dharmasthala issue, Minister, Ramalingareddy