Monday, August 3, 2026

BDA Apartments

Home Front Page ಗಣೇಶ ಹಬ್ಬ ಆಚರಣೆಗೆ ಕಠಿಣ ನಿರ್ಬಂಧ ಸರಿಯಲ್ಲ- ಶಾಸಕ ಅಶ್ವಥ್ ನಾರಾಯಣ್

ಗಣೇಶ ಹಬ್ಬ ಆಚರಣೆಗೆ ಕಠಿಣ ನಿರ್ಬಂಧ ಸರಿಯಲ್ಲ- ಶಾಸಕ ಅಶ್ವಥ್ ನಾರಾಯಣ್

ಬೆಂಗಳೂರು,ಆಗಸ್ಟ್ ,21,2025 (www.justkannada.in): ಗಣೇಶ ಹಬ್ಬ ಆಚರಣೆಗೆ  ಸರ್ಕಾರ ಕಠಿಣ ನಿರ್ಬಂಧ ವಿಧಿಸಿರುವುದು ಸರಿಯಲ್ಲ ಎಂದು ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಅಶ್ವಥ್ ನಾರಾಯಣ್, ಸನಾತನ ಧರ್ಮದ  ವಿರುದ್ದ ಮಾತನಾಡಿದರು, ಅಜಾ‍ನ್ ಗೆ ಸರ್ಕಾರ ಕಡಿವಾಣ ಹಾಕಲಿಲ್ಲ ಸುಪ್ರೀಂಕೋರ್ಟ್  ಸೂಚನೆ ಇದ್ರೂ ಕ್ರಮ ಕೈಗೊಳ್ಳಲಿಲ್ಲ. ಆದರೆ ಗಣೇಶ ಹಬ್ಬಕ್ಕೆ ನಿರ್ಬಂಧಗಳನ್ನ ವಿಧಿಸಲಾಗಿದೆ.  ಹಬ್ಬ ಆಚರಣೆಗೆ ಅವಕಾಶ ನೀಡಬೇಕು ನಿರ್ಬಂಧಗಳು ಸರಿಯಲ್ಲ ಎಂದರು.

ಭೂಕುಸಿತದಿಂದ ಸಂಕಷ್ಟದಲ್ಲಿರುವರಿಗೆ  ಪರಿಹಾರಕ್ಕಾಗಿ ವಯನಾಡಿಗೆ ರಾಜ್ಯ ಸರ್ಕಾರದಿಂದ 10 ಕೋಟಿ ರೂ ಅನುದಾನ  ಹಿನ್ನೆಲೆಯಲ್ಲಿ ಈ ಕುರಿತು ಮಾತನಾಡಿದ ಅಶ್ವಥ್ ನಾರಾಯಣ್,  ಇದು ಕಾಂಗ್ರೆಸ್ ಪಕ್ಷದ ಹಣ ಎಂದುಕೊಂಡಿದ್ದಾರೆ ಸಾರ್ವಜನಿಕರ ತೆರಿಗೆ ಹಣ ದುರ್ಬಳಕೆಯಾಗಬಾರದು. ನಾವು ಸರ್ಕಾರದ ನಿರ್ಧಾರ ಖಂಡಿಸುತ್ತೇವೆ ಎಂದರು.

Key words: Strict, restrictions, Ganesha festival, MLA, Ashwath Narayan