ಶಿವಮೊಗ್ಗ, ಸೆಪ್ಟೆಂಬರ್, 11,2025 (www.justkannada.in): ಕೆಲವು ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ಬೈಕ್ ಮತ್ತು ಒಮ್ನಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ನಲ್ಲಿ ಈ ಘಟನೆ ನಡೆದಿದೆ. ಶಿಕಾರಿಪುರ ತಾಲೂಕಿನ ಮಟ್ಟಿಕೋಟೆ ಗ್ರಾಮದ ರೇಖಾ (20) ಮತ್ತು ಗಂಗೊಳ್ಳಿ ಗ್ರಾಮದ ಬಸವನಗೌಡ ದ್ಯಾಮನಗೌಡ್ರ (25) ಮೃತಪಟ್ಟವರು.
ಆಗಸ್ಟ್ ನಲ್ಲಿ ರೇಖಾ, ಬಸವನಗೌಡ ನಿಶ್ಚಿತಾರ್ಥವಾಗಿತ್ತು. ಮಳೆಯ ಕಾರಣಕ್ಕೆ ಮದುವೆಯನ್ನು ಮುಂದೂಡಿದ್ದ 2 ಕುಟುಂಬಸ್ಥರು, ಡಿಸೆಂಬರ್ ನಲ್ಲಿ ಇಬ್ಬರ ಮದುವೆಗೆ ದಿನಾಂಕ ನಿಗದಿ ಮಾಡಿದ್ದರು. ಈ ಮಧ್ಯೆ ಜೋಡಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಓಮ್ನಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ.
ಈ ಕುರಿತು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Key words: accident, Bike, Shimoga, couple, death







