ಗಡಿಪಾರು ಆದೇಶದ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ತಿಮರೋಡಿ

ಬೆಂಗಳೂರು,ಸೆಪ್ಟಂಬರ್,29,2025 (www.justkannada.in): ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನ ದಕ್ಷಿಣ ಕನ್ನಡದಿಂದ ಗಡಿಪಾರು ಮಾಡಿರುವ ಆದೇಶ ರದ್ದು ಮಾಡುವಂತೆ ಕೋರಿ ಹೋರಾಟಗಾರ ಮಹೇಶ್ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಚೆನ್ನಯ್ಯನಿಗೆ ಆಶ್ರಯ ನೀಡಿದ್ದ ಮಹೇಶ್ ತಿಮರೋಡಿ ವಿರುದ್ದ  32 ಪ್ರಕರಣಗಳು ದಾಖಲಾಗಿವೆ.  ಈ ಹಿನ್ನೆಲೆಯಲ್ಲಿ  ಸೆ.20 ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಅವರು ಮಹೇಶ್ ತಿಮರೋಡಿ ಅವರನ್ನ ರಾಯಚೂರು ಜಿಲ್ಲೆ ಮಾನ್ವಿಗೆ 1 ವರ್ಷದವರೆಗೆ ಗಡಿಪಾರು ಮಾಡಿ  ಆದೇಶ ಹೊರಡಿಸಿದ್ದರು.

ಈ ಹಿನ್ನೆಲೆಯಲ್ಲಿ ಈ ಗಡಿಪಾರು ಆದೇಶ ರದ್ದುಗೊಳಿಸುವಂತೆ ಕೋರಿ ಮಹೇಶ್ ತಿಮರೋಡಿ ಹೈಕೋರ್ಟ್ ಮೊರೆ ಹೋಗಿದ್ದು ನಾಳೆ ವಿಚಾರಣೆ ನಡೆಯುವ ಸಾಧ್ಯತೆ ಇದೆ.

Key words: Mahesh Timarodi,  High Court ,against ,exile order