5 ಕೆ.ಜಿ ಅಕ್ಕಿ ಬದಲು ‘ಆಹಾರದ ಕಿಟ್’ ನೀಡಲು ಸರ್ಕಾರ ನಿರ್ಧಾರ

ಬೆಂಗಳೂರು,ಅಕ್ಟೊಬರ್,9,2025 (www.justkannada.in): ರಾಜ್ಯದ ಪಡಿತರ ಚೀಟಿದಾರರಿಗೆ  ವಿತರಿಸಲಾಗುತ್ತಿರುವ 10 ಕೆಜಿ ಅಕ್ಕಿಯಲ್ಲಿ  ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಆಹಾರ ಸಚಿವ ಎಚ್ ಕೆ ಮುನಿಯಪ್ಪ,  ಪಡಿತರ ಚೀಟಿದಾರರಿಗೆ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು  ನಿರ್ಧರಿಸಲಾಗಿದೆ. ಆಹಾರದ ಕಿಟ್ ನಲ್ಲಿ ಸಕ್ಕರೆ, ಉಪ್ಪು, ತೊಗರಿಬೇಳೆ,  ಅಡುಗೆ ಎಣ್ಣೆ, ಗೋಧಿ ಇರಲಿದೆ  ಎಂದರು.

ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಹಾಗೂ ದುರುಪಯೋಗ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. 2023ರಲ್ಲಿ 10 ಕೆಜಿ ಅಕ್ಕಿ ನೀಡಲು ಮುಂದಾಗಿದ್ದವು ಆದರೆ ಕೇಂದ್ರ ಸರ್ಕಾರ ಆಗ ಅಕ್ಕಿ ನೀಡಲಿಲ್ಲ ಎಂದರು.

Key words: government, decision , ‘food kit,  rice