ಅ.31ರೊಳಗೆ ಕಡ್ಡಾಯವಾಗಿ ಜಾತಿ ಗಣತಿ ಸಮೀಕ್ಷೆ ಮುಗಿಯಬೇಕು-ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಅಕ್ಟೋಬರ್,21,2025 (www.justkannada.in):  ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ  ಸಮೀಕ್ಷೆ ನಡೆಯುತ್ತಿದ್ದು ಈಗಾಗಲೇ ಸಮೀಕ್ಷೆಯ ಅವಧಿಯನ್ನ ಸರ್ಕಾರ ಅಕ್ಟೋಬರ್ 31ಕ್ಕೆ ವಿಸ್ತರಿಸಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 31ರೊಳಗೆ ಜಾತಿಗಣತಿ ಸಮೀಕ್ಷೆ ಕಡ್ಡಾಯವಾಗಿ ಮುಗಿಸುವಂತೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯದ ರಾಮನಗರ, ಬೀದರ್‌ ಹಾಗೂ ಧಾರವಾಡದಲ್ಲಿ ಶೇ.90ರಷ್ಟು ಸಮೀಕ್ಷೆ ಮುಗಿದರೆ, ಬೆಂಗಳೂರಲ್ಲಿ ಶೇ.45ರಷ್ಟು ಮಾತ್ರ ಸಮೀಕ್ಷೆ ಮುಗಿದಿದೆ. ಸಮೀಕ್ಷೆಯ ಅವಧಿಯನ್ನು ಅಕ್ಟೋಬರ್‌ 31ರವರೆಗೆ ವಿಸ್ತರಣೆ ಮಾಡಲಾಗಿದೆ.

ಅಕ್ಟೋಬರ್​ 31ರ ಒಳಗೆ ಕಡ್ಡಾಯವಾಗಿ ಸಮೀಕ್ಷೆ ಮುಗಿಯಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

Key words: Caste census, survey, must be, completed , October 31st , DCM, DK Shivakumar