ಬೆಂಗಳೂರು,ಅಕ್ಟೋಬರ್,23,2025 (www.justkannada.in): ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಬಗ್ಗೆ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಹೈಕಮಾಂಡ್ ಸಂದರ್ಭ ಬಂದಾಗ ಸಿಎಲ್ ಪಿ ಸಭೆ ಕರೆದು ಶಾಸಕರ ಅಭಿಪ್ರಾಯ ಕೇಳುತ್ತಾರೆ. ಆ ನಂತರ ಯಾರು?, ಏನು? ಎಂಬ ಘೋಷಣೆ ಆಗುತ್ತದೆ. ಇದು ನಮ್ಮಲ್ಲಿರುವ ಪದ್ಧತಿ ಎಂದರು.
ಸಾರ್ವಜನಿಕ ಸ್ಥಳಗಳಲ್ಲಿ ಸಂಘಸಂಸ್ಥೆಗಳು ಕಾರ್ಯಕ್ರಮ ಆಯೋಜಿಸಲು ಅನುಮತಿ ಪಡೆಯಬೇಕೆಂಬ ನಿರ್ಣಯ ಕುರಿತು ಪ್ರತಿಕ್ರಿಯಿಸಿದ ಸಚಿವ ಪರಮೇಶ್ವರ್, ನಮ್ಮ ಸುತ್ತೋಲೆಯಲ್ಲಿ ಆರ್ಎಸ್ಎಸ್ ಪದ ಬಂದಿಲ್ಲ. ಆರ್ಎಸ್ಎಸ್ ಗುರಿಯಾಗಿಸಿ ಈ ಆದೇಶ ಹೊರಡಿಸಿಲ್ಲ. ಇದು ಎಲ್ಲರಿಗೂ ಅನ್ವಯವಾಗುತ್ತದೆ. ಶಾಲಾ, ಕಾಲೇಜಿಗೆ ತೊಂದರೆ ಆಗಬಾರದು. 2013ರಲ್ಲಿ ಜಗದೀಶ್ ಶೆಟ್ಟರ್ ಆದೇಶ ಮಾಡಿದ್ದರು. ಅದನ್ನೇ ಪುನರ್ ಪರಿಶೀಲನೆ ಮಾಡಿದ್ದೇವೆ ಎಂದರು.
Key words: Party, decision, CM change, final, Home Minister, Parameshwar