ಮಾಜಿ ಶಾಸಕ ಆರ್.ವಿ.ದೇವರಾಜ್ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಡಿಸೆಂಬರ್, 2,2025 (www.justkannada.in):   ಎಂಎಲ್ ಎ  ಹಾಗೂ ಎಂಎಲ್ ಸಿ ಆಗಿ ಸೇವೆ ಸಲ್ಲಿಸಿದ್ದ ಆರ್.ವಿ.ದೇವರಾಜ್ ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಅವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಅವರು ಮಾಜಿ ಶಾಸಕ ಆರ್.ವಿ.ದೇವರಾಜ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿದರು.

ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎಂಎಲ್ ಎ  ಹಾಗೂ ಎಂಎಲ್ ಸಿ ಆಗಿ ಸೇವೆ ಸಲ್ಲಿಸಿದ್ದ ಆರ್.ವಿ.ದೇವರಾಜ್ ಅವರು ನಿಧನರಾಗಿದ್ದಾರೆ. ನಾಳೆಯೇ ಅವರ ಜನ್ಮದಿನವಾಗಿದ್ದರಿಂದ, ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದು ಅತ್ಯಂತ ನೋವಿನ ಸಂಗತಿ.  ದೇವರಾಜು ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಅವರ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ. ಇತ್ತೀಚೆಗೆ ನನ್ನನ್ನು ಭೇಟಿಯಾಗಿದ್ದ ದೇವರಾಜು ಅವರು ಕೆಲವು ವಿಚಾರಗಳ ಬಗ್ಗೆ ಚರ್ಚಿಸಿದ್ದರು. ದೇವರಾಜ್ ಅವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಅವರ ಕುಟುಂಬವರ್ಗ ಹಾಗೂ ಅಭಿಮಾನಿ ಬಳಗಕ್ಕೆ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ಸಿಎಲ್ ಪಿ ಸಭೆಯಲ್ಲಿ ಶಾಸಕರ ಭೇಟಿ

ಶಾಸಕರೊಂದಿಗೂ ಔತಣಕೂಟ ಏರ್ಪಡಿಸಿ ಒಗ್ಗಟ್ಟಿನ ಸೂತ್ರವನ್ನು ಪಠಿಸಲಾಗುವುದೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಸಿಎಲ್ ಪಿ ಸಭೆ ಸಂದರ್ಭದಲ್ಲಿ  ಶಾಸಕರೊಂದಿಗೆ ಔತಣಕೂಟ ಏರ್ಪಡಿಸಲಾಗುವುದು ಎಂದರು.

ನನ್ನ ಮತ್ತು ಡಿಸಿಎಂ ಅವರ  ಪಕ್ಷ ಮತ್ತು ಸಿದ್ಧಾಂತ ಒಂದೇ

ಸಿ ಎಂ ಮತ್ತು ಡಿಸಿಎಂ ಬಗ್ಗೆ ಬ್ರದರ್ಸ್ ಎಂಬ ಮಾತು ಮುನ್ನಲೆಗೆ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಒಂದೇ ಪಕ್ಷದಲ್ಲಿರುವ ನಾವು ಎಂದಿಗೂ ಬ್ರದರ್ಸ್. ಒಂದೇ ಪಕ್ಷ ಸಿದ್ದಾಂತವನ್ನು ಹೊಂದಿರುವ ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡುವ ಜೊತೆಗೆ 2028ರ ವಿಧಾನಸಭಾ ಚುನಾವಣೆಯನ್ನೂ ಸಹ ಒಟ್ಟಿಗೆ ಎದುರಿಸಿ, ರಾಜ್ಯದಲ್ಲಿ ಪುನ: ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದೇವೆ. ನಮ್ಮ ನಡುವೆ ಯಾವ ಭಿನ್ನಾಭಿಪ್ರಾಯವೂ ಇಲ್ಲ, ರಾಜ್ಯದ ಒಳಿತಿಗಾಗಿ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್ ನ ಶಾಸಕರೆಲ್ಲರೂ ಒಗ್ಗಟ್ಟಾಗಿದ್ದಾರೆ

ನಾಯಕತ್ವ ಬದಲಾವಣೆಯ ಬಗ್ಗೆ ಶಾಸಕರ ನಿಲುವುಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ನ ಯಾವ ಶಾಸಕರಲ್ಲಿಯೂ ಬೇಧವಿಲ್ಲ. ಶಾಸಕರು ತಮ್ಮ ಅಭಿಪ್ರಾಯಗಳನ್ನು ನೀಡಿದ್ದಾರಷ್ಟೇ. ಕಾಂಗ್ರೆಸ್ ನ ಎಲ್ಲ ಶಾಸಕರೂ ಅಧಿವೇಶನದಲ್ಲಿ ಭಾಗವಹಿಸಿ, ವಿಪಕ್ಷಗಳನ್ನು ಒಗ್ಗಟ್ಟಿನಿಂದ ಎದುರಿಸಲಿದೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು.

ಸಚಿವ ಸಂಪುಟ  ಪುನಾರಚನೆ

ಸಚಿವಸಂಪುಟ  ಪುನರ್ರಚನೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಸಚಿವ ಸಂಪುಟ ಪುನಾರಚನೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸಬೇಕಾಗಿದೆ ಎಂದರು.

Key words: former MLA,  R.V. Devaraj, death, condolences, CM Siddaramaiah