ಗಿಳಿಯನ್ನು ರಕ್ಷಿಸಲು ಹೋಗಿ ದುರಂತ ಅಂತ್ಯ ಕಂಡ ಯುವಕ

ಬೆಂಗಳೂರು, ಡಿಸೆಂಬರ್​ 12,2025 (www.justkannada.in): ಸಾಕಿದ್ದ ಗಿಳಿಯನ್ನು ರಕ್ಷಿಸಲು ಹೋದ ಯುವಕನೊಬ್ಬ  ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗಿರಿನಗರದ ಖಾಸಗಿ ಅಪಾರ್ಟ್‌ಮೆಂಟ್  ನಲ್ಲಿ ಈ ದುರಂತ ನಡೆದಿದೆ. ಅರುಣ್ ಕುಮಾರ್ (32) ಕರೆಂಟ್ ಶಾಕ್ ನಿಂದ ಮೃತಪಟ್ಟ ಯುವಕ. ಹೈಟೆನ್ಷನ್ ವೈರ್​ ಕಂಬದ ಮೇಲೆ ಕುಳಿತಿದ್ದ ಸುಮಾರು 2 ಲಕ್ಷ ರೂ ಬೆಲೆ ಬಾಳುವ ಫಾರಿನ್​​ ಗಿಳಿಯನ್ನು ರಕ್ಷಿಸಲು ಹೋಗಿ ಈ ದುರ್ಘಟನೆ ನಡೆದಿದೆ.

ಗಿರಿನಗರದ ಖಾಸಗಿ ಅಪಾರ್ಟ್‌ಮೆಂಟ್​​​ ಒಳಭಾಗದಲ್ಲಿರುವ ಹೈಟೆನ್ಷನ್ ವೈರ್​ ಕಂಬದ ಮೇಲೆ  ಗಿಳಿ ಕುಳಿತಿತ್ತು. ಇದನ್ನು ನೋಡಿದ ಅರುಣ್​ ಕುಮಾರ್​ ಗಿಳಿಯನ್ನು ರಕ್ಷಿಸಲು  ಅಪಾರ್ಟ್‌ಮೆಂಟ್​ ಕಾಪೌಂಡ್ ಮೇಲೆ ನಿಂತು ಸ್ಟೀಲ್ ಪೈಪ್ ​​ಗೆ ಕಟ್ಟಿಗೆ ಸೇರಿಸಿ ಅದನ್ನು ಓಡಿಸಲು ಮುಂದಾಗಿದ್ದಾರೆ.

ಈ ವೇಳೆ ವಿದ್ಯುತ್  ಶಾಕ್ ಹೊಡೆದು ಅರುಣ್ ಕುಮಾರ್ ಕಾಪೌಂಡ್​​ ಮೇಲಿಂದ ಕೆಳಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು ಆದರೆ ಅರುಣ್ ಮೃತಪಟ್ಟಿದ್ದಾರೆ. ಈ ಕುರಿತು ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words:  young man, death, rescue,  parrot met, Bangalore