ಬೆಂಗಳೂರು,ಡಿಸೆಂಬರ್,25,2025 (www.justkannada.in): ಚಿತ್ರದುರ್ಗದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟಂಬಗಳಿಗೆ ಸಿಎಂ ಸಿದ್ದರಾಮಯ್ಯ ತಲಾ 5 ಲಕ್ಷ ರೂ.ಪರಿಹಾರ ಘೋಷಣೆ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಚಿತ್ರದುರ್ಗದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು ಎಂದಿದ್ದಾರೆ.
ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
Key words: accident, CM, announces, Rs 5 lakh







