Wednesday, September 2, 2026

BDA Apartments

Home Front Page ಬ್ಯಾನರ್ ಕಟ್ಟುವ ವಿಚಾರಕ್ಕೆ ದೊಡ್ಡ ಗಲಾಟೆ ಸರಿಯಲ್ಲ- ಸಚಿವ ರಾಮಲಿಂಗರೆಡ್ಡಿ

ಬ್ಯಾನರ್ ಕಟ್ಟುವ ವಿಚಾರಕ್ಕೆ ದೊಡ್ಡ ಗಲಾಟೆ ಸರಿಯಲ್ಲ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಜನವರಿ,3,2026 (www.justkannada.in): ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ವೇಳೆ ಫೈರಿಂಗ್ ನಡೆದು ಓರ್ವ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿ ಘಟನೆಯನ್ನ ಖಂಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ,  ಎಲ್ಲ ಪಕ್ಷದವರು ಕಾರ್ಯಕ್ರಮದ ವೇಳೆ ಬ್ಯಾನರ್ ಕಟ್ಟುತ್ತಾರೆ. ಕಾರ್ಯಕಮಕ್ಕೆ ಬ್ಯಾನರ್ ಕಟ್ಟುವ ವಿಚಾರದಲ್ಲಿ ದೊಡ್ಡ ಗಲಾಟೆ  ಆಗಿರುವುದು ಸರಿಯಲ್ಲ. ಒಂದು ಪ್ರಾಣ ಹೋಗಿದೆ.  ಎಲ್ಲರಿಗೂ ಕಾನೂನು ಒಂದೇ. ತಪ್ಪು ಯಾರೇ ಮಾಡಿದರೂ ತಪ್ಪೇ ಎಂದು ಹೇಳಿದ್ದಾರೆ.

Key words: banner, ballari, roit, Minister, Ramalingareddy