Wednesday, August 5, 2026

BDA Apartments

Home Front Page ರಾಜ್ಯದ ಬಿಜೆಪಿ ಸಂಸದರಿಂದ ಕರ್ನಾಟಕಕ್ಕೆ ದೊಡ್ಡ ಅನ್ಯಾಯ- ಸಚಿವ ಎಂ.ಬಿ ಪಾಟೀಲ್

ರಾಜ್ಯದ ಬಿಜೆಪಿ ಸಂಸದರಿಂದ ಕರ್ನಾಟಕಕ್ಕೆ ದೊಡ್ಡ ಅನ್ಯಾಯ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಫೆಬ್ರವರಿ,2,2026 (www.justkannada.in): ಬೆಂಗಳೂರು-ಪುಣಿ-ಮುಂಬೈ ರೈಲ್ವೆ ಕಾರಿಡಾರ್‌ ಘೋಷಣೆ ಮಾಡದೇ ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ಅನ್ಯಾಯ ಮಾಡಲಾಗಿದೆ.  ಕೇಂದ್ರ ಸಚಿವರಾದ  ಪ್ರಹ್ಲಾದ ಜೋಶಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ವೈಫಲ್ಯ ಎದ್ದು ಕಾಣುತ್ತಿದ್ದು,  ರಾಜ್ಯದ ಬಿಜೆಪಿ ಸಂಸದರಿಂದ ಕರ್ನಾಟಕಕ್ಕೆ ದೊಡ್ಡ ಅನ್ಯಾಯವಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್,  ಬೆಂಗಳೂರು-ಹೈದರಾಬಾದ್, ಬೆಂಗಳೂರು-ಚೆನ್ನೈ ಹೈಸ್ಪೀಡ್ ರೈಲು ಸ್ವಾಗತಾರ್ಹವಾದರೂ, ಕರ್ನಾಟಕದೊಳಗೆ 100 ಕಿ.ಮೀ. ಕೂಡ ಓಡದ ಮಾರ್ಗಗಳಿಂದ ರಾಜ್ಯಕ್ಕೆ ಏನು ಲಾಭ? ಬದಲಿಗೆ ಬೆಂಗಳೂರು-ಪುಣೆ-ಮುಂಬೈ ಹೈಸ್ಪೀಡ್ ರೈಲು ಕಾರಿಡಾರ್ ಅಗತ್ಯವಾಗಿತ್ತು. ಪೂರಕ ಬಜೆಟ್‌ ನಲ್ಲಾದರೂ ಈ ಕಾರಿಡಾರ್‌ ಘೋಷಣೆ ಮಾಡಬೇಕು. ಇಲ್ಲವಾದರೆ ಜನಜಾಗೃತಿ ಆಂದೋಲನ ಮಾಡಲಾಗುವುದು ಎಂದರು.

. ವಿಜಯಪುರ ಜಿಲ್ಲೆಯ ಸಂಸದರು ಆಟಕ್ಕೂ ಇಲ್ಲ, ಲೆಕ್ಕಕ್ಕೂ ಇಲ್ಲ ಎಂಬಂತಾಗಿದ್ದಾರೆ. ಉತ್ತರ ಕರ್ನಾಟಕ ಭಾಗದ ಸಂಸದರಾದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್‌ ಸೇರಿದಂತೆ ರಾಜ್ಯದ ಯಾವೊಬ್ಬರ ಸಂಸದರೂ ಈ ಬಗ್ಗೆ ರೈಲ್ವೆ ಸಚಿವರನ್ನು, ಪ್ರಧಾನಿ ಮೋದಿ ಅವರ ಮೇಲೆ ಒತ್ತಡ ಹೇರುವಲ್ಲಿ ವಿಫಲವಾಗಿದ್ದಾರೆ ಎಂದು  ಸಚಿವ ಎಂ.ಬಿ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಅತೀ ಹೆಚ್ಚು ತೆರಿಗೆ ಕೊಡುತ್ತಿದೆ. ಆದರೆ  ಅನುದಾನ ಹಂಚಿಕೆಯಲ್ಲಿ ನ್ಯಾಯಸಮ್ಮತ ಹಂಚಿಕೆ ಇಲ್ಲ, ಅಗತ್ಯ ಯೋಜನೆಗಳಿಗೆ ಅನುದಾನ ಇಲ್ಲ. ಇದು ಕೇವಲ ಬಜೆಟ್ ವೈಫಲ್ಯವಲ್ಲ, ಒಕ್ಕೂಟ ವ್ಯವಸ್ಥೆಯ ಆತ್ಮಕ್ಕೇ ಹೊಡೆತವಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್ ಟೀಕಿಸಿದರು.

Key words:  injustice. Karnataka, state BJP, MPs, Minister, M.B. Patil