ಬಿಜೆಪಿ, ಜೆಡಿಎಸ್ ಅಹೋರಾತ್ರಿ ಧರಣಿ: ಸಚಿವ ತಿಮ್ಮಾಪುರ ಬೆನ್ನಿಗೆ ನಿಂತ ಡಿಸಿಎಂ ಡಿಕೆಶಿ

ಬೆಂಗಳೂರು,ಫೆಬ್ರವರಿ,4,2026 (www.justkannada.in):  ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸಚಿವ ಆರ್.ಬಿ ತಿಮ್ಮಾಪುರ ರಾಜೀನಾಮೆಗೆ ಪಟ್ಟು ಹಿಡಿದು ಬಿಜೆಪಿ ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿ ನಡೆಸಿದ್ದಾರೆ.

ಈ ನಡುವೆ ಇದೀಗ ಅಬಕಾರಿ ಇಲಾಖೆ ಸಚಿವ ಆರ್.ಬಿ ತಿಮ್ಮಾಪುರ ಬೆನ್ನಿಗೆ ಡಿಸಿಎಂ ಡಿಕೆ ಶಿವಕುಮಾರ್ ನಿಂತಿದ್ದಾರೆ.

ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ಅಧಿವೇಶನದ ಕೊನೇ ದಿನ ಬಿಜೆಪಿ, ಜೆಡಿಎಸ್ ಸದಸ್ಯರು ಡ್ರಾಮಾ ಮಾಡುತ್ತಿದ್ದಾರೆ.  ಒಬ್ಬ ದಲಿತರಿಗೆ ತೊಂದರೆ ಕೊಡಬೇಕು ಅಂತಾ ಈ ರೀತಿ ಮಾಡುತ್ತಿದ್ದಾರೆ. ವಿಪಕ್ಷಗಳು ಅವರು ಮಾಡಿರುವ ಹಗರಣಗಳ ಎಲ್ಲವನ್ನು ಬಿಚ್ಚಿಡೋಕೆ ದಾಖಲೆ ಇಟ್ಟುಕೊಂಡಿದ್ದೇವೆ ಎಂದು ಟಾಂಗ್ ಕೊಟ್ಟರು.

Key words: BJP, JDS, Protest, DCM DK Shivakumar, Minister Thimmapura