ಮೆಟ್ರೋ ಪ್ರಯಾಣ ದರ ಏರಿಕೆ: ಸಮರ್ಥಿಸಿಕೊಂಡ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಫೆಬ್ರವರಿ,5,2026 (www.justkannada.in): ಮೆಟ್ರೋ ಪ್ರಯಾಣ ದರ ಶೇ.5 ರಷ್ಟು ಹೆಚ್ಚಳ ಮಾಡಿರುವುದನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಬೆಂಗಳೂರಿಗರಿಗೆ ಮತ್ತಷ್ಟು ಮೆಟ್ರೋ ವಿಸ್ತರಣೆ ಆಗಬೇಕಿದೆ ಇದರಿಂದ ದರ ಹೆಚ್ಚಳ ಅನಿವಾರ್ಯ.  ಬಿಎಂಆರ್ ಸಿಎಲ್ ರಾಜ್ಯ ಕೇಂದ್ರ ಸರ್ಕಾರದ ಅಂಗಸಂಸ್ಥೆಯಾಗಿದೆ  ದರ ಹೆಚ್ಚಳ ಕೇವಲ ಒಂದು ಕಡೆಯಿಂದ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ಮೆಟ್ರೋ ಪ್ರಯಾಣ ದರ ಶೇ.5 ರಷ್ಟು ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಕೊಟ್ಟಿದ್ದು, ಫೆಬ್ರವರಿ 9 ರಿಂದ ಇದು ಜಾರಿಗೆ ಬರಲಿದೆ. ಈ ಬಗ್ಗೆ ಬಿಎಂಆರ್ ಸಿಎಲ್ ಅಧಿಕೃತ ಆದೇಶ ಹೊರಡಿಸಿದೆ.

Key words: Metro fare, hike,  Minister, Dinesh Gundu Rao, defends