ನವದೆಹಲಿ,ಫೆಬ್ರವರಿ,5,2026 (www.justkannada.in): ದೇಶದ ಅಭಿವೃದ್ದಿ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ವಿಕಸಿತ ಭಾರತ ಒಂದೇ ನಮ್ಮ ಅಜೆಂಡಾ ಹಾಗೂ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ನುಡಿದರು.
ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಗೆ ವಂದನಾ ನಿರ್ಣಯ ಮಂಡಿಸಿ ಮಾತನಾಡಿದ ಪ್ರಧಾನಿ ಮೋದಿ, ನಾವು ಪ್ರತಿಯೊಂದು ಗುರಿಯನ್ನು ಸಾಧಿಸಬೇಕು ಎಲ್ಲಾ ಕ್ಷೇತ್ರಗಳಲ್ಲೂ ಭಾರತ ಆತ್ಮವಿಶ್ವಾಸದಿಂದ ಮುನ್ನುಗ್ಗುತ್ತಿದೆ. ಭಾರತವು ಭವಿಷ್ಯಕ್ಕೆ ಬೇಕಾದ ಒಪ್ಪಂದಗಳನ್ನು ಮಾಡಿಕೊಳ್ಳುತ್ತಿದೆ ಭಾರತ 9 ದೇಶಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ ಕಾಂಗ್ರೆಸ್ ಪಕ್ಷ ದೇಶದ ರೈತರಿಗೂ ಅನ್ಯಾಯ ಮಾಡಿದೆ. ನಾವು ಮಣ್ಣಿನ ಮಕ್ಕಳಿಗೆ ನೆರವಾಗಿದ್ದೇವೆ ಎಂದರು.
ನಮ್ಮ ಯುವ ಪ್ರತಿಭೆಗಳಿಗೆ ಜಾಗತಿಕವಾಗಿ ಬೇಡಿಕೆ ಹೆಚ್ಚಾಗಿದೆ. ಭಾರತ ಇತ್ತೀಚೆಗೆ 9 ಒಪ್ಪಂದಗಳಿಗೆ ಸಹಿ ಹಾಕಿದೆ. ಈ ಹಿಂದೆ ಯಾವುದೇ ದೇಶ ಭಾರತದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿರಲಿಲ್ಲ. ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಏಕೆ ಮುಂದೆ ಬಂದಿರಲಿಲ್ಲ . ಇದಕ್ಕೆ ವಿರೋಧ ಪಕ್ಷಗಳು ಉತ್ತರಿಸಬೇಕು ಕಾಂಗ್ರೆಸ್ ತಪ್ಪುಗಳನ್ನ ಸರಿಪಡಿಸಲು ಸಮಯ ಕಳೆಯುತ್ತಿದ್ದೇವೆ. ಅವರ ತಪ್ಪು ಸರಿಪಡಿಸಲು ಸಾಕಷ್ಟು ಸಮಯ ಬೇಕು. ಕಾಂಗ್ರೆಸ್ ಗೆ ಯಾವುದೇ ಯೋಜನೆ ದೃಷ್ಠಿಕೋನವಿಲ್ಲ ಕಾಂಗ್ರೆಸ್ ಸರ್ಕಾರ ತನ್ನ ಜೇಬು ತುಂಬಿಕೊಂಡಿತ್ತು ಅಷ್ಟೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.
Key words: developed India, our agenda, goal, PM Modi







