ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್: ಬಿಜೆಪಿ ಶಾಸಕನಿಗೆ ಬಂಧನದ ಭೀತಿ

ಬೆಂಗಳೂರು, ಫೆಬ್ರವರಿ,10,2026 (www.justkannada.in): ರೌಡಿಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್  ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟ್​ ನಲ್ಲಿ​ ವಜಾ‌ಗೊಂಡಿದ್ದು  ಈ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಬೈರತಿ ಬಸವರಾಜ್​​ ಗೆ  ಮತ್ತೆ ಸಂಕಷ್ಟ ಎದುರಾಗಿದೆ.

ಇದೀಗ ಜಾಮೀನು ಅರ್ಜಿ ವಜಾಗೊಂಡಿರುವುದರಿಂದ ಶಾಸಕ ಭೈರತಿ ಬಸವರಾಜುಗೆ  ಬಂಧನದ ಭೀತಿ ಎದುರಾಗಿದ್ದು, ಪೊಲೀಸರು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ. ಕಳೆದ ವರ್ಷ ಜುಲೈನಲ್ಲಿ   ಬೆಂಗಳೂರಿನ ಹಲಸೂರಿನಲ್ಲಿ ರೌಡಿ ಬಿಕ್ಲುಶಿವನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಭೈರತಿ ಬಸವರಾಜು ಕೂಡ ಆರೋಪಿಯಾಗಿದ್ದಾರೆ.

Key words:  High Court, dismisses, bail plea, BJP, MLA