Saturday, August 22, 2026

BDA Apartments

Home Front Page ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ- ಕೇಂದ್ರ ಸಚಿವ ವಿ.ಸೋಮಣ್ಣ

ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ- ಕೇಂದ್ರ ಸಚಿವ ವಿ.ಸೋಮಣ್ಣ

ಬೆಂಗಳೂರು,ಫೆಬ್ರವರಿ,17,2026 (www.justkannada.in): ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವ ವಿ.ಸೋಮಣ್ಣ, ಪಕ್ಷ ಏನು ಹೇಳುತ್ತದೋ ಅದನ್ನ ಮಾಡಿಕೊಂಡು ಹೋಗುತ್ತೇನೆ.  ರಾಜ್ಯ ರಾಜಕಾರಣಕ್ಕೆ ವಾಪಸ್ ಆಗುವ ಚಿಂತನೆ ಇಲ್ಲ ಎಂದರು.

ನಮ್ಮಲ್ಲಿ ವ್ಯಕ್ತಿಗಿಂತ ಪಾರ್ಟಿ ದೊಡ್ಡದು. ಪಾರ್ಟಿಗಿಂತ ದೇಶ ದೊಡ್ಡದು.  ನಾನು ಪಕ್ಷದ ಶಿಸ್ತಿನ ಸಿಪಾಯಿ ಹೈಕಮಾಂಡ್ ಹೇಳಿದಂತೆ ನಾನು ಕೇಳುತ್ತೇನೆ ಎಂದು ವಿ.ಸೋಮಣ್ಣ ತಿಳಿಸಿದರು.

Key words: No plans, state politics, Union Minister, V. Somanna