ನಾಳೆ ರಾಜ್ಯಾದ್ಯಂತ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು,ಫೆಬ್ರವರಿ,18,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ ಸಾರಿಗೆ ನೌಕರರು ಬೆಂಗಳೂರು ಚಲೋಗೆ ಕರೆ ನೀಡಿದ್ದು ಈ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ವೇತನ ಹೆಚ್ಚಳದ ಹಿಂಬಾಕಿ ಹಾಗೂ ವೇತನ ಪರಿಷ್ಕರಣೆಗೆ ಆಗ್ರಹಿಸಿ ನಾಳೆ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿಯಿಂದ ಸಾರಿಗೆ ನೌಕರರು ಬೆಂಗಳೂರು ಚಲೋಗೆ ಕರೆ ನೀಡಿದ್ದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ನಾಳೆ ಕೆಎಸ್ ಆರ್ ಟಿಸಿ, ಬಿಎಂಟಸಿ ಬಸ್ ಗಳು ರಸ್ತೆಗಿಳಿಯೋದು ಡೌಟ್ ಆಗಿದ್ದು, ಹೀಗಾಗಿ  ನಾಳೆ ರಾಜ್ಯಾದ್ಯಂತ ಸಾರಿಗೆ ಬಸ್ ಗಳ ಬಂದ್ ಬಿಸಿ ತಟ್ಟಲಿದೆ. ಇನ್ನು ಬಸ್ ಸಂಚಾರದಲ್ಲಿ ವ್ಯತ್ಯಯ ಆಗದಂತೆ ಕ್ರಮ ಕೈಗೊಳ್ಳುವಂತೆ  ಸಾರಿಗೆ ಅಧಿಕಾರಿಗಳಿಗೆ ಕೆಎಸ್ ಆರ್ ಟಿಸಿ  ಎಂಡಿ ಖಡಕ್ ಸೂಚನೆ ನೀಡಿದ್ದಾರೆ.

Key words: disruption, statewide, transport, bus services, tomorrow.