Friday, August 21, 2026

BDA Apartments

Home Front Page ಸ್ನೇಹಮಯಿ ಕೃಷ್ಣ ಸಿಸಿಬಿ ಪೊಲೀಸರ ವಶಕ್ಕೆ

ಸ್ನೇಹಮಯಿ ಕೃಷ್ಣ ಸಿಸಿಬಿ ಪೊಲೀಸರ ವಶಕ್ಕೆ

ಬೆಂಗಳೂರು,ಫೆಬ್ರವರಿ,20,2026 (www.justkannada.in): ಮುಡಾ ಪ್ರಕರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನಲ್ಲಿ ಸಿಟಿ ಸಿವಿಲ್ ಕೋರ್ಟ್ ಬಳಿ  ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು, ಶಾಂತಿನಗರ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಮುಂಬಡ್ತಿ ಪಡೆಯಲು ಸಿಎಸ್ ಶಾಲಿನಿ ರಜನೀಶ್ ಅವರಿಗೆ ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ 1.60 ಕೋಟಿ ರೂ.  ಹಣ ನೀಡಿದ್ದರು ಎಂದು ಸ್ನೇಹಮಯಿ ಕೃಷ್ಣ ಅವರು ಆರೋಪಿಸಿದ್ದರು.  ಈ ಸಂಬಂಧ ಇದೀಗ ಸ್ನೇಹಮಯಿ ಕೃಷ್ಣ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.

Key words: Snehamayi Krishna, custody, CCB police