ಸ್ನೇಹಮಯಿ ಕೃಷ್ಣ ಬಂಧನ: ಸರ್ಕಾರದ ವಿರುದ್ದ ಆರ್.ಅಶೋಕ್ ಕಿಡಿ

ಬೆಂಗಳೂರು,ಫೆಬ್ರವರಿ,20,2026 (www.justkannada.in):  ಮುಡಾ ಪ್ರಕರಣದ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಆರ್.ಅಶೋಕ್, ನ್ಯಾಯಕ್ಕಾಗಿ ಹೋರಾಡುವವರನ್ನು ಬಂಧಿಸಲಾಗುತ್ತಿದೆ. ನ್ಯಾಯಕ್ಕಾಗಿ ಹೋರಾಡುವವರ ಧ್ವನಿ ಕುಗ್ಗಿಸುವ ಕೆಲಸ  ಮಾಡಲಾಗುತ್ತಿದೆ. ಅದರ ಭಾಗವಾಗಿ ಈಗ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ನ್ಯಾಯದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ. ಇದು ದುರಾಡಳಿತದ ಪರಮಾವಧಿ ಎಂದು ವಾಗ್ದಾಳಿ ನಡೆಸಿದರು.

ಸ್ನೇಹಮಯಿ ಕೃಷ್ಣ ಅವರು ಮುಡಾ ಹಗರಣವನ್ನು ಬಯಲಿಗೆಳೆದು ಹೋರಾಟ ನಡೆಸುತ್ತಿದ್ದಾರೆ. ಗಾಂಧಿ ಆದರ್ಶವಿಟ್ಟುಕೊಂಡು ಹೋರಾಡುತ್ತಿರುವ ಸ್ನೇಹಮಯಿ ಕೃಷ್ಣ ಅವರನ್ನು ಕೋರ್ಟ್ ಆವರಣದಲ್ಲಿ ಬಂಧಿಸಿದ್ದು ಅಕ್ಷಮ್ಯ ಅಪರಾಧ. ಎಂದು ಕಿಡಿಕಾರಿದ್ದಾರೆ.

Key words: Snehamayi Krishna, arrest, R. Ashok, against, government