ಹಗರಣ ರಹಿತವಾಗಿ ಖಾಲಿ ಹುದ್ದೆಗಳನ್ನು ಭರ್ತಿಗೆ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್ ಭರವಸೆ

ಬೆಂಗಳೂರು,ಫೆಬ್ರವರಿ,25,2026 (www.justkannada.in): ಖಾಲಿ ಹುದ್ದೆಗಳ ಭರ್ತಿಗೆ ಕೂಡಲೇ ನೇಮಕಾತಿ ಆರಂಭಕ್ಕೆ ಆಗ್ರಹಿಸಿ ನಿನ್ನೆ ಸಾವಿರಾರು ಉದ್ಯೋಗಾಕಾಂಕ್ಷಿಗಳು ಬೃಹತ್ ಹೋರಾಟ ನಡೆಸಿದ ಬೆನ್ನಲ್ಲೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.

ಈ ಕುರಿತು ಮಾತಾನಾಡಿರುವ ಡಿಸಿಎಂ ಡಿಕೆ ಶಿವಕುಮಾರ್,  ಯಾವುದೇ ಹಗರಣವಾಗದ ರೀತಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದ ತಿಳಿಸಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು  ಆಗಿಲ್ಲ. ಆ ಅವಧಿಯಲ್ಲಿ ಹಲವು ಹಗರಣಗಳು ನಡೆದವು. ಒಳಮೀಸಲಾತಿ ವಿಚಾರದಲ್ಲಿ ಕೆಲವು ಅಡಚಣೆಗಳು ಎದುರಾಗುತ್ತಿವೆ. ನಿರುದ್ಯೋಗಿ ಯುವಕರಿಗೆ ನೆರವಾಗುವ ಉದ್ದೇಶದಿಂದಲೇ ಯುವನಿಧಿ ಯೋಜನೆ ಜಾರಿಗೆ ತಂದಿದ್ದೇವೆ ನಮಗೆ ಯುವಕರ ನೋವು ಅರ್ಥವಾಗುತ್ತದೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸುತ್ತೇವೆ ಎಂದರು.

ಕೆಪಿಎಸ್‌ಸಿ ಸೇರಿದಂತೆ ವಿವಿಧ ನೇಮಕಾತಿ ಸಂಸ್ಥೆಗಳಿಗೆ ಜವಾಬ್ದಾರಿ ನೀಡಲಾಗಿದೆ. ಶಿಕ್ಷಕರ ಹಾಗೂ ಆರೋಗ್ಯ ಇಲಾಖೆಯ ಹುದ್ದೆಗಳ ಭರ್ತಿ ಪ್ರಕ್ರಿಯೆ ಮುಂದುವರಿದಿದೆ ಎಂದು  ಡಿಕೆ ಶಿವಕುಮಾರ್ ತಿಳಿಸಿದರು.

Key words: Action, fill, vacant, posts, DCM, DK Shivakumar