ಹುಬ್ಬಳ್ಳಿ,ಫೆಬ್ರವರಿ,25,2026 (www.justkannada.in): ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಗೆ ರಾಜ್ಯ ಸರ್ಕಾರ ಗಡಗಡ ನಡುಗಿದೆ. ಸಿದ್ದರಾಮಯ್ಯನವರೇ ಸುಳ್ಳು ಹೇಳಬೇಡಿ. ಸುಳ್ಳುರಾಮಯ್ಯ ಅಂತಾಗಬೇಡಿ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ಧಾರವಾಡ ವಿದ್ಯಾರ್ಥಿಗಳ ಹೋರಾಟಕ್ಕೆ ಸರ್ಕಾರ ಗಡಗಡ ನಡುಗಿದೆ. ಖಾಲಿ ಹುದ್ದೆ ಭರ್ತಿ ಮಾಡುತ್ತೇವೆಂದು ಸಿಎಂ ಟ್ವಿಟ್ ಮಾಡಿದ್ದಾರೆ ಇದು ಹೋರಾಟಕ್ಕೆ ಸರ್ಕಾರ ಯಾವ ರೀತಿ ಅಂಜಿದೆ ಅಂತಾ ತೋರಿಸುತ್ತದೆ. ಖಾಲಿ ಹುದ್ದೆಗಳ ನೇಮಕಾತಿಗಾಗಿ ಈ ಹಿಂದೆ ಅನೇಕ ಹೋರಾಟ ನಡೆದಿದೆ. ವಿದ್ಯಾರ್ಥಿಗಳ ಪ್ರತಿಭಟನೆಗೆ ಅನುಮತಿ ನೀಡಿರಲಿಲ್ಲ ಎಂದರು.
ಉರ್ದು ಭಾಷೆಯಲ್ಲಿ ಸರ್ಕಾರದ ಆಹ್ವಾನ ಪತ್ರ ಪ್ರಕಟ ವಿಚಾರ ಕುರಿತು ಪ್ರತಿಕ್ರಿಯಿಸಿದ ಅರವಿಂದ ಬೆಲ್ಲದ್, ಸರ್ಕಾರ ಈ ರೀತಿ ಒಣ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ. ಅತಿಯಾದ ಓಲೈಕೆಯಿಂದ ಭಾಷಾ ಬಾಂದವ್ಯ ಹಾಳು ಮಾಡಬಾರದು ಕಾಂಗ್ರೆಸ್ ಮೊದಲಿನಿಂದಲೂ ಜಗಳ ತಂದಿಡುವ ಕೆಲಸ ಮಾಡುತ್ತಿದೆ . ಕಾಂಗ್ರೆಸ್ ಆಡಳಿತ ಮರೆತು ರಾಜಕಾರಣ ಮಾಡಬಾರದು. ಆಡಳಿತ ಮರೆತು ರಾಜಕಾರಣ ಮಾಡಿದರೆ ಮತ್ತೆ ಅಧಿಕಾರಕ್ಕೆ ಬರಲ್ಲ. ಕಾಂಗ್ರೆಸ ನವರೇ ನಮಗೆ ತಟ್ಟೆಯಲ್ಲಿ ಅಧಿಕಾರ ಬಿಟ್ಟು ಕೊಡುತ್ತಾರೆ ಎಂದು ಅರವಿಂದ ಬೆಲ್ಲದ್ ಹೇಳಿದರು.
Key words: Government, Dharwad, students, protest, Arvind Bellad







