Saturday, September 5, 2026

BDA Apartments

Home Front Page ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು

ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು

ಧಾರವಾಡ,ಫೆಬ್ರವರಿ,27,2026 (www.justkannada.in): ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ.

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದ್ದು ಈ ಮೂಲಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಎರಡು ತಿಂಗಳಲ್ಲಿ ವಿಚಾರಣೆ ಮುಗಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

2016ರಲ್ಲಿ  ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರ ಕೊಲೆಯಾಗಿತ್ತು.  ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದಾರೆ. ಇವರ ಪರ ಶರಣಗೌಡ ಪಾಟೀಲ್ ವಾದ ಮಂಡಿಸಿದ್ದರು.

Key words: Supreme Court, granted, bail, MLA, Vinay Kulkarni