Wednesday, July 29, 2026

BDA Apartments

Home Front Page ಒಳಮೀಸಲಾತಿ ಅನುಷ್ಠಾನಕ್ಕೆ ಎಲ್ಲಾ ಸಮುದಾಯಗಳನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ- ಮಾಜಿ ಸಿಎಂ ಬೊಮ್ಮಾಯಿ

ಒಳಮೀಸಲಾತಿ ಅನುಷ್ಠಾನಕ್ಕೆ ಎಲ್ಲಾ ಸಮುದಾಯಗಳನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ- ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು,ಮಾರ್ಚ್,2,2026 (www.justkannada.in): ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಅನುಷ್ಠಾನ ಮಾಡಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ ಬೊಮ್ಮಾಯಿ,  ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ್‌ ದಾಸ್‌‍ ಅವರ ಶಿಫಾರಸ್ಸಿನ ಆಧಾರದ ಮೇಲೆ ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿಯನ್ನು ವರ್ಗೀಕರಿಸಿದೆ. ಇದಕ್ಕೆ ಕೆಲವು ಸಮುದಾಯಗಳು ಆಕ್ಷೇಪ ವ್ಯಕ್ತಪಡಿಸಿವೆ. ಹೀಗಾಗಿ ಎಲ್ಲಾ ಸಮುದಾಯಗಳ ವಿಶ್ವಾಸವನ್ನು ತೆಗೆದುಕೊಳ್ಳಬೇಕು ಎಂದರು.

ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿರುವ ಕುರಿತು ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ನೇಮಕಾತಿಯನ್ನು ಯಾವ ರೀತಿ ಮಾಡಬೇಕು ಎನ್ನುವ ಬಗ್ಗೆ ಸ್ಪಷ್ಟನೆ ಬೇಕಿದೆ. ಇವರು ಮನಸ್ಸು ಮಾಡಿದರೆ ಸಾಧ್ಯತೆ ಇದೆ. ಆದರೆ ಅವರೇ ಗೊಂದಲಕ್ಕೆ ಸಿಲುಕಿದ್ದಾರೆ. ಎಲ್ಲಾ ಸಮುದಾಯದ ಜೊತೆ ಚರ್ಚೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಂಡು ನೇಮಕಾತಿ ಮಾಡಬೇಕು ಎಂದರು.

Key words: implementation, internal reservation, Former CM, Bommai