ಬೆಂಗಳೂರು,ಮಾರ್ಚ್,3,2026 (www.justkannada.in): ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರ ಚರ್ಚಿತವಾಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಕಾಂಗ್ರೆಸ್ ಶಾಸಕರು ಮುಖಂಡರು ಹೈಕಮಾಂಡ್ ಗೆ ಆಗ್ರಹಿಸುತ್ತಲೇ ಇದ್ದಾರೆ. ಇದೀಗ ಈ ವಿಷಯಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ನಾನುಂಟು, ಸಿಎಂ ಉಂಟು, ಪಾರ್ಟಿ ಉಂಟು ಅಧಿಕಾರ ಹಂಚಿಕೆ ಬಗ್ಗೆ ನಾನು ಎಲ್ಲೂ ಮಾತಾಡಿಲ್ಲ. ನಾನು ಪಕ್ಷದ ಅಧ್ಯಕ್ಷ ನನ್ನಿಂದ ಶಿಸ್ತು ಉಲ್ಲಂಘನೆ ಆಗಬಾರದು. ನನಗೆ ಯಾರು ಗುರಿ ಮಾಡಬಾರದು. ನೀನು ಪಕ್ಷ ಕೊಲ್ಲುತ್ತಿದ್ದೀಯಾ ಎಂದು ಯಾರೂ ಹೇಳಬಾರದು ಎಂದರು.
ನಾನು ಕಟ್ಟಿ ಬೆಳೆಸಿದ ಪಕ್ಷಕ್ಕೆ ಬ್ಲ್ಯಾಕ್ ಮಾಡಲು ಇಷ್ಟವಿಲ್ಲ. ಇದರಿಂದಾಗಿ ಲಕ್ಷಾಂತರ ಕಾರ್ಯಕರ್ತರಿಗೆ ತೊಂದರೆಯಾಗುತ್ತದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
Key words: blackmail, party, DCM, DK Shivakumar







